ಸಿದ್ದರಾಮಯ್ಯನವರ ವಿರುದ್ದ ಕಣಕ್ಕಿಳಿಯಲು ಸಿದ್ದನಿದ್ದೇನೆ: ಬಿ ವೈ ವಿಜಯೇಂದ್ರ

masthmagaa.com:

ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದೆ. ಆದ್ರೆ ಈಗಲೇ ರಾಜ್ಯ ರಾಜಕೀಯ ಗರಿಗೆದರಿದೆ. ವಿಪಕ್ಷ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯರ ಕ್ಷೇತ್ರ ಇನ್ನೂ ಗುಟ್ಟಾಗಿಯೇ ಉಳಿದಿದೆ. ಇದ್ರ ನಡುವೆಯೇ ಅವರ ವಿರುದ್ದ ನಿಲ್ಲೊದಕ್ಕೆ ನಾನ್‌ ರೆಡಿ ಅಂತ ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ. ಸಿದ್ದರಾಮಯ್ಯ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ರೆ, ಅವರ ವಿರುದ್ದ ಕಣಕ್ಕಿಳಿಯುವಂತೆ ಪಕ್ಷ ಸೂಚಿಸಿದ್ರೆ ನಾನು ಸಿದ್ದನಿದ್ದೇನೆ ಅಂತ ವಿಜಯೇಂದ್ರ ತಿಳಿಸಿದ್ದಾರೆ. ಜೊತೆಗೆ ಮೋದಿ ಅನ್ನೊದು ಕೇವಲ ಅಲೆ ಅಲ್ಲ, ಅದೊಂದು ಸುನಾಮಿ. ಮುಂಬರೊ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಉತ್ತರ ಸಿಗಲಿದೆ ಅಂತ ಕಿಡಿಕಾರಿದ್ದಾರೆ.

-masthmagaa.com

Contact Us for Advertisement

Leave a Reply