masthmagaa.com:
ಸಚಿವ ಶರಣಪ್ರಕಾಶ್ ಪಾಟೀಲ್ ಅವರಿಂದ ಕಿರುಕುಳ ಕೊಡ್ತಿದ್ರು ಅಂತ ಆರೋಪಿಸಿ ಬಿಜೆಪಿ ಕಾರ್ಯಕರ್ತರೊಬ್ರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯ ಶಿರೋಳ್ಳಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೂ ಮುನ್ನ ಮೂರು ಆಡಿಯೋ ರೆಕಾರ್ಡ್ ಮಾಡಿರುವ ಬಿಜೆಪಿ ಕಾರ್ಯಕರ್ತ ಶಿವಕುಮಾರ್, ತನ್ನ ಸಾವಿಗೆ ಸಚಿವ ಶರಣಪ್ರಕಾಶ್ ಪಾಟೀಲ್ ನೇರ ಕಾರಣ ಅಂತ ಆರೋಪಿಸಿದ್ದಾರೆ. ನಾನು ಹಿಂದೂ ಹುಲಿಯಾಗಿದ್ದೇನೆ, ಹಿಂದೂ ಹುಲಿಯಾಗಿಯೇ ಸಾಯುತ್ತೇನೆ. ಹಿಂದೂ ಧರ್ಮದ ಬಗ್ಗೆ ಎಲ್ಲಿಯೂ ಮಾತನಾಡಬಾರದು. ಮಾತಾಡಿದರೆ ಇವರಿಗೆ ಬೆಂಕಿ ಬಿಳುತ್ತದೆ. ಹಾಗಾಗಿ ನನ್ನ ಸಾವಿಗೆ ಕಾಂಗ್ರೆಸ್ ಕಾರ್ಯಕರ್ತರು, ಸಚಿವ ಶರಣಪ್ರಕಾಶ್ ಪಾಟೀಲ್ ಕಾರಣ ಅಂತ ಆರೋಪಿಸಿ ಆಡಿಯೋ ರೆಕಾರ್ಡ್ ಮಾಡಿ ಕಳುಹಿಸಿದ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
-masthmagaa.com
Contact Us for Advertisement