ಬಿಜೆಪಿ ಶಾಸಕನನ್ನ ಅನರ್ಹಗೊಳಿಸಿ ಅಂತ ಬಿಜೆಪಿ ಕಾರ್ಯಕರ್ತರಿಂದಲೇ ರಾಜ್ಯಪಾಲರಿಗೆ ದೂರು!

masthmagaa.com:

ಹಾವೇರಿ ಕ್ಷೇತ್ರದ ಬಿಜೆಪಿ ಶಾಸಕ ನೆಹರು ಓಲೆಕಾರ್​ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಕೋರಿ ಬಿಜೆಪಿ ಕಾರ್ಯಕರ್ತರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಲಕ್ಷಾಂತರ ಮೊತ್ತದ ಕಾಮಗಾರಿಯನ್ನ ಪುತ್ರರಿಗೇ ನೀಡಿದ ಆರೋಪದಡಿ ನೆಹರು ಓಲೆಕಾರ್‌ಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಿಂದ 2 ವರ್ಷ ಜೈಲುಶಿಕ್ಷೆ ಆಗಿತ್ತು. ಬಳಿಕ ಜಾಮೀನು ಕೂಡ ನೀಡಲಾಗಿತ್ತು. ಭ್ರಷ್ಟಾಚಾರ ಕೇಸ್​ನಲ್ಲಿ ನ್ಯಾಯಾಲಯ ತೀರ್ಪು ನೀಡಿದ್ದರೂ ಯಾವುದೇ ಕ್ರಮವಾಗಿಲ್ಲ. ನೆಹರು ಓಲೆಕಾರ್​ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಅಂತ ಈಗ ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ.

-masthmagaa.com

Contact Us for Advertisement

Leave a Reply