masthmagaa.com:
ಬೆಂಗಳೂರಿನ ಭಾರಿ ಟ್ರಾಫಿಕ್ ತಪ್ಪಿಸೋಕೆ ಬಿಡದಿವರೆಗೂ ʻನಮ್ಮ ಮೆಟ್ರೊʼ ರೈಲು ಸಂಚಾರ ವಿಸ್ತರಣೆ ಮಾಡಲಾಗುತ್ತೆ ಅಂತ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಬಿಡದಿ ಯೋಜನಾ ಪ್ರಾಧಿಕಾರ ರದ್ದು ಮಾಡಿ, ‘ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ’ವಾಗಿ ಪರಿವರ್ತಿಸಲು ಆದೇಶಿಸಲಾಗಿದೆ. ಅಲ್ದೆ ʻಬಿಡದಿ ತನಕ ಮೆಟ್ರೊ ಮಾರ್ಗ ವಿಸ್ತರಣೆಗೆ ಈಗಾಗಲೇ ಸರ್ವೇ ಮಾಡಿಸಲಾಗ್ತಿದೆʼ. ಈ ಬಗ್ಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸುವಂತೆ ಬೆಂಗಳೂರು ಮೆಟ್ರೊ ರೈಲು ನಿಗಮಕ್ಕೆ ಸೂಚಿಸಿದ್ದೇನೆ’ ಅಂತ ಶಿವಕುಮಾರ್ ಹೇಳಿದ್ದಾರೆ.
-masthmagaa.com
Contact Us for Advertisement