ಕಾಲುಜಾರಿ ಜಲಪಾತಕ್ಕೆ ಬಿದ್ದಿದ್ದ ಯುವಕನ ಮೃತದೇಹ ಪತ್ತೆ!

masthmagaa.com:

ಕೊಲ್ಲೂರು ಸಮೀಪದ ಅರಶಿನಗುಂಡಿ ಜಲಪಾತ ವೀಕ್ಷಣೆ ವೇಳೆ ಕಾಲುಜಾರಿ ನೀರುಪಾಲಾಗಿದ್ದ ಯುವಕನ ಮೃತದೇಹ ಭಾನುವಾರ ಪತ್ತೆಯಾಗಿದೆ. ಜಲಪಾತದಿಂದ 200 ಮೀಟರ್ ಕೆಳಗಡೆ ಕಲ್ಲಿನ ಪೊಟರೆಯೊಳಗೆ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಜಲಪಾತಕ್ಕೆ ಸ್ನೇಹಿತನೊಂದಿಗೆ ಬಂದಿದ್ದ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಶರತ್ ಕುಮಾರ್ ಹುಡುಕಾಟಕ್ಕೆ ಕಳೆದೊಂದು ವಾರದಿಂದ ಭದ್ರತಾ ಪಡೆಗಳು ಹುಡುಕಾಟ ನಡೆಸ್ತಾ ಇದ್ವು.

-masthmagaa.com

Contact Us for Advertisement

Leave a Reply