masthmagaa.com:

ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿಗೆ ಮಧ್ಯಂತರ ಜಾಮೀನು ನೀಡಲು ಬಾಂಬೆ ಹೈಕೋರ್ಟ್​ ನಿರಾಕರಿಸಿದೆ. ಜೊತೆಗೆ ಜಾಮೀನಿಗಾಗಿ ಕೆಳ ನ್ಯಾಯಾಲಯಕ್ಕೆ ಹೋಗುವಂತೆ ನಿರ್ದೇಶಿಸಲಾಗಿದೆ. ಇದರ ಬೆನ್ನಲ್ಲೇ ಅಲಿಬಾಗ್ ಸೆಷನ್ಸ್ ಕೋರ್ಟ್​ನಲ್ಲಿ ಅರ್ನಬ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

ಮತ್ತೊಂದುಕಡೆ ಅರ್ನಬ್ ಗೋಸ್ವಾಮಿ ಬಂಧನ ಪ್ರಕರಣದಲ್ಲೀಗ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಮಧ್ಯಪ್ರವೇಶಿಸಿದ್ದಾರೆ. ರಾಜ್ಯಪಾಲರು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್​ಮುಖ್​ ಜೊತೆ ಮಾತನಾಡಿದ್ದು, ಅರ್ನಬ್ ಗೋಸ್ವಾಮಿಗೆ ನೀಡಿರುವ ಭದ್ರತೆ ಮತ್ತು ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ. ಜೊತೆಗೆ ಅವರ ಕುಟುಂಬಸ್ಥರು ಅರ್ನಬ್ ಭೇಟಿಯಾಗಲು ಮತ್ತು ಮಾತನಾಡಲು ಅವಕಾಶ ನೀಡುವಂತೆ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply