masthmagaa.com:
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಅಧಿಕಾರಿಗಳು ಗೃಹ ಸಚಿವ ಅಮಿತ್ ಶಾರನ್ನ ಭೇಟಿ ಮಾಡಿದ ಬೆನ್ನಲ್ಲೇ ಕರ್ನಾಟಕವೂ ಸಿಡಿದೆದ್ದಿದೆ. ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಅಮಿತ ಶಾ ಅವರೊಂದಿಗೆ ಈಗಾಗಲೇ ಮಾತುಕತೆ ನಡೆಸಿದ್ದು, ಎಲ್ಲ ಅಗತ್ಯ ಮಾಹಿತಿ ನೀಡಿದ್ದೇನೆ. ಬರೋ ಸೋಮವಾರ ರಾಜ್ಯ ಸಂಸದರ ನಿಯೋಗ ಶಾ ಅವ್ರನ್ನ ಭೇಟಿ ಮಾಡಿ ವಿವರವನ್ನ ಸಲ್ಲಿಸಲಿದೆ ಅಂತ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇನ್ನು ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಅವರೊಂದಿಗೆ ಡಿಸೆಂಬರ್ 14 ಅಥ್ವಾ 15ರಂದು ಸಭೆ ನಡೆಯೋ ಸಾಧ್ಯತೆಯಿದೆ ಅಂತ ಬೊಮ್ಮಾಯಿ ತಿಳಿಸಿದ್ದಾರೆ.
-masthmagaa.com
Contact Us for Advertisement