masthmagaa.com:
ಇಂದು ನಟಸಾರ್ವಭೌಮ ಡಾ.ರಾಜ್ಕುಮಾರ್ ಅವರ 17ನೇ ಪುಣ್ಯತಿಥಿ. ರಾಜ್ ಪರಿವಾರದ ಸದಸ್ಯರು ಬೆಂಗಳೂರಿನ ಕಂಠೀರವ ಸ್ಟುಡಿಯೋ ಬಳಿಯ ಸಮಾಧಿಗೆ ತೆರಳಿ ಪೂಜೆ ಸಲ್ಲಿಸಿದರು. ಹಾಗೆಯೇ ರಾಜ್ಕುಮಾರ್ ಅವರ ಸಮಾಧಿ ಪಕ್ಕದಲ್ಲೇ ಇರುವ ಪುನೀತ್ ರಾಜ್ಕುಮಾರ್ ಮತ್ತು ಪಾರ್ವತಮ್ಮ ರಾಜ್ಕುಮಾರ್ ಅವರ ಸಮಾಧಿಗಳಿಗೂ ಪೂಜೆ ಸಲ್ಲಿಸಲಾಯಿತು. ರಾಘವೇಂದ್ರ ರಾಜ್ ಕುಮಾರ್, ಯುವರಾಜ್ ಕುಮಾರ್, ಶಿವರಾಜ್ ಕುಮಾರ್, ಅಶ್ವಿನಿ ಪುನೀತ್ ರಾಜ್ ಕುಮಾರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
‘ಆಡು ಮುಟ್ಟದ ಸೊಪ್ಪಿಲ್ಲ; ಅಣ್ಣಾವ್ರು ಮಾಡದ ಪಾತ್ರವಿಲ್ಲ’ ನಟರಾಗಿ, ಹಿನ್ನೆಲೆ ಗಾಯಕರಾಗಿ, ಕನ್ನಡ ಸಂಸ್ಕೃತಿಯ ಪ್ರತಿಬಿಂಬವಾಗಿ ಇಡೀ ದೇಶದಲ್ಲಿ ಖ್ಯಾತಿವೆತ್ತ ಹೃದಯವಂತ ನಟ ಡಾ.ರಾಜಕುಮಾರ್ 5 ದಶಕಗಳ ಕಾಲ ಕನ್ನಡ ಚಿತ್ರರಂಗದಲ್ಲಿ ಹೀರೋ ಆಗಿ ಮೆರೆದರು. ಅವರು ನಮ್ಮನ್ನು ಅಗಲಿ ಇಂದಿಗೆ (ಏಪ್ರಿಲ್ 12) ಬರೋಬ್ಬರಿ 17 ವರ್ಷ. ರಾಜ್ಕುಮಾರ್ ಅಭಿಮಾನಿಗಳ ಪಾಲಿಗೆ ಏಪ್ರಿಲ್ ಖುಷಿ ಹಾಗೂ ದುಃಖ ನೀಡುವ ತಿಂಗಳು. ಏಪ್ರಿಲ್ 24ರಂದು ರಾಜ್ಕುಮಾರ್ ಬರ್ತ್ಡೇ. ಅದಕ್ಕೆ 12 ದಿನ ಇರುವಾಗಲೇ ಅವರು ನಿಧನ ಹೊಂದಿದರು. 2006ರ ಏ.12ರಂದು ಅವರ ಕೋಟ್ಯಂತರ ಅಭಿಮಾನಿಗಳಿಗೆ ಆಘಾತ ತರುವ ಸುದ್ದಿ ಸಿಕ್ಕಿತ್ತು. ಅಣ್ಣಾವ್ರು ಇನ್ನಿಲ್ಲ ಎನ್ನುವ ಸುದ್ದಿ ಕೇಳಿ ಎಲ್ಲರಿಗೂ ಆಘಾತವಾಯಿತು. ಅಣ್ಣಾವ್ರೂ ಭೌತಿಕವಾಗಿ ನಮ್ಮನ್ನ ಅಗಲಿದ್ದಾರೆ, ಅವರ ಸಿನಿಮಾಗಳ ಮೂಲಕ ಕೋಟ್ಯಾನುಕೋಟಿ ಅಭಿಮಾನಿಗಳ ಹೃದಯದಲ್ಲಿ ಜೀವಂತವಾಗಿದ್ದಾರೆ.
-masthmagaa.com
Contact Us for Advertisement