masthmagaa.com:
ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವ್ರ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಭದ್ರತಾ ಲೋಪ ಉಂಟಾಗಿದೆ. ಯಡಿಯೂರಪ್ಪ ಬಂದಿದ್ದ ಹೆಲಿಕಾಪ್ಟರ್ ತಾತ್ಕಾಲಿಕವಾಗಿ ನಿರ್ಮಿಸಲಾಗಿರುವ ಹೆಲಿಪ್ಯಾಡ್ನಲ್ಲಿ ಲ್ಯಾಂಡ್ ಆಗುವ ವೇಳೆ ಪ್ಲಾಸ್ಟಿಕ್ ಚೀಲಗಳು ಹಾರಿ ಬಂದಿವೆ. ತಕ್ಷಣ ಎಚ್ಚೆತ್ತ ಪೈಲೆಟ್ ಹೆಲಿಕಾಪ್ಟರ್ನ್ನು ಲ್ಯಾಂಡ್ ಮಾಡಿಲ್ಲ. ಈ ವೇಳೆ ಪೊಲೀಸರು ಪ್ಲಾಸ್ಟಿಕ್ ಚೀಲಗಳನ್ನು ತೆರವುಗೊಳಿಸಿದ ನಂತ್ರ ಚಾಪರ್ನ್ನ ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿದೆ. ಅಂದ್ಹಾಗೆ ಗುಲ್ಬರ್ಗಾ ಜಿಲ್ಲೆಯ ಜೇರ್ಗಿಯಲ್ಲಿ ನಡೆಯುತ್ತಿರವ ವಿಜಯ ಸಂಕಲ್ಪ ರಥಯಾತ್ರೆಗೆ ಭಾಗಿಯಾಗೋಕೆ ಬಿಎಸ್ವೈ ಬಂದಿದ್ರು.
-masthmagaa.com
Contact Us for Advertisement