masthmagaa.com: 2023ರ ಮೊದಲಾರ್ಧದಲ್ಲಿ ಪ್ರತಿದಿನ ಒಂದಕ್ಕಿಂತ ಹೆಚ್ಚು ದ್ವೇಷ ಭಾಷಣ ಅಥವಾ ಮುಸ್ಲಿಂರನ್ನು ಗುರಿಯಾಗಿಸಿದ ರ‍್ಯಾಲಿಗಳು ನಡೆದಿವೆ ಅಂತ ಹಿಂದುತ್ವ ವಾಚ್‌ ವರದಿ ಮಾಡಿದೆ. 2023ರ ಮೊದಲ ಆರು ತಿಂಗಳಲ್ಲಿ ಮುಸ್ಲಿಂರನ್ನು ಗುರಿಯಾಗಿಸಿಕೊಂಡು ಒಟ್ಟು 255 ದ್ವೇಷ ಭಾಷಣ ಸಭೆಗಳು ಅಥವಾ ರ‍್ಯಾಲಿಗಳು ನಡೆದಿದ್ದು, ಈ ಪೈಕಿ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲೇ ಹೆಚ್ಚು ವರದಿಯಾಗಿವೆ ಅಂತ ಹಿಂದುತ್ವ ವಾಚ್ ಹೇಳಿದೆ. ಇನ್ನು ಈ ದ್ವೇಷ ಭಾಷಣದ ಘಟನೆಗಳು ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ನಡೆದಿದ್ರೆ, ನಂತರ ಕರ್ನಾಟಕ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಗುಜರಾತ್ ನಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಉತ್ತರಾಖಂಡ ಭಾರತದ ಒಟ್ಟು ಜನಸಂಖ್ಯೆಯ ಶೇಕಡಾ 1 ಕ್ಕಿಂತ ಕಡಿಮೆ ಜನಸಂಖ್ಯೆ ಹೊಂದಿದ್ದರೂ, ಈ ವರ್ಷ ಸುಮಾರು ಶೇಕಡಾ 5 ರಷ್ಟು ದ್ವೇಷ ಭಾಷಣದ ಪ್ರಕರಣಗಳು ವರದಿಯಾಗಿವೆ ಎಂದು ಹಿಂದುತ್ವ ವಾಚ್ ತಿಳಿಸಿದೆ. -masthmagaa.com Share on: WhatsAppContact Us for AdvertisementRead More →

masthmagaa.com: ಏರ್ ಇಂಡಿಯಾ ತನ್ನ ಮಹಿಳಾ ಕ್ಯಾಬಿನ್ ಸಿಬ್ಬಂದಿಯ ಸಮವಸ್ತ್ರದಲ್ಲಿ ಬದಲಾವಣೆ ತರಲು ಮುಂದಾಗಿದೆ ಅಂತ ತಿಳಿದು ಬಂದಿದೆ. ಕಳೆದ 60 ವರ್ಷಗಳಿಂದ ಫ್ಲೈಟ್ ಅಟೆಂಡೆಂಟ್‌ಗಳು ಸಾಂಪ್ರದಾಯಿಕ ಭಾರತೀಯ ಉಡುಗೆಯಾದ ಸೀರೆಗಳನ್ನು ಧರಿಸುತ್ತಿದ್ದರು. ಆದರೆ ಈಗ ಏರ್‌ ಇಂಡಿಯಾ ಗಗನಸಖಿಯರ ಸೀರೆ ಟ್ರೆಂಡ್‌ ಬದಲಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಹೊಸದಾಗಿ ತಮ್ಮ ಮಹಿಳಾ ಸಿಬ್ಬಂದಿಗೆ ಡಿಸೈನರ್‌ ಚೂಡಿದಾರ್‌ಗಳು ಹಾಗೂ ಪುರುಷ ಸಿಬ್ಬಂದಿಗೆ ಡಿಸೈನರ್‌ ಸೂಟ್‌ಗಳನ್ನು ಕಂಪನಿ ವಿನ್ಯಾಸ ಮಾಡುತ್ತಿದೆ. ಪ್ರಖ್ಯಾತ ಫ್ಯಾಶನ್‌ ಡಿಸೈನರ್‌ ಮನೀಶ್‌ ಮಲ್ಹೋತ್ರಾ ಈ ಹೊಸ ಸಮವಸ್ತ್ರಗಳನ್ನು ವಿನ್ಯಾಸ ಮಾಡಲಿದ್ದಾರೆ ಅನ್ನೋ ಸುದ್ಧಿ ಹರಿದಾಡ್ತಿದೆ. ಅಂದ್ಹಾಗೆ ಜೆಆರ್‌ಡಿ ಟಾಟಾ ಅವರು 1962ರಲ್ಲಿ ಏರ್‌ ಇಂಡಿಯಾ ಮಹಿಳಾ ಸಿಬ್ಬಂದಿಗೆ ಸೀರೆಯನ್ನು ಪರಿಚಯಿಸಿದ್ದರು. ಅಂದಿನಿಂದ ಏರ್‌ ಇಂಡಿಯಾ ಇದೇ ಟ್ರೆಂಡ್‌ ಮುಂದುವರಿಸಿಕೊಂಡು ಬಂದಿತ್ತು. -masthmagaa.com Share on: WhatsAppContact Us for AdvertisementRead More →

masthmagaa.com: ಗುಜರಾತ್‌ನಲ್ಲಿ ಹೂಡಿಕೆ ಮಾಡದಂತೆ ವಿದೇಶಿ ಹೂಡಿಕೆದಾರರಿಗೆ ಬೆದರಿಕೆ ಹಾಕಲಾಗಿತ್ತು ಅಂತ ಪ್ರಧಾನಿ ಮೋದಿ ಹಿಂದಿನ ಯುಪಿಎ ಸರ್ಕಾರದ ವಿರುದ್ದ ಆರೋಪಿಸಿದ್ದಾರೆ. ಗುಜರಾತ್‌ನಲ್ಲಿ ನಡೆದ ವೈಬ್ರೆಂಟ್ ಗುಜರಾತ್ ಜಾಗತಿಕ ಶೃಂಗಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ತಾವು ಮುಖ್ಯಮಂತ್ರಿಯಾಗಿದ್ದಾಗ ಈ ರೀತಿಯ ಶೃಂಗಸಭೆಯಲ್ಲಿ ಭಾಗವಹಿಸಲು ಅಂದಿನ ಕೇಂದ್ರ ಸಚಿವರು ನಿರಾಕರಿಸಿದ್ದರು. ಗುಜರಾತ್‌ನಲ್ಲಿ ಬಂಡವಾಳ ಹೂಡಿಕೆ ಮಾಡಬಾರದು ಅಂತ ವಿದೇಶಿ ಹೂಡಿಕೆದಾರರಿಗೆ ಬೆದರಿಕೆ ಹಾಕಲಾಗಿತ್ತು. ಇನ್ವೆಸ್ಟರ್ಸ್‌ ಹೂಡಿಕೆ ಮಾಡಲು ಮುಂದಾದ್ರೂ ಅವರಿಗೆ ಯಾವುದೇ ಬೆಂಬಲ ಸಿಗ್ತಿರಲಿಲ್ಲ ಅಂತ ಮೋದಿ ಹೇಳಿದ್ದಾರೆ. -masthmagaa.com Share on: WhatsAppContact Us for AdvertisementRead More →

masthmagaa.com: ಇನ್ನು ಚಿನ್ನ, ಬೆಳ್ಳಿ ವಿಚಾರಕ್ಕೆ ಬಂದ್ರೆ 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 479 ರೂಪಾಯಿ ಕಡಿಮೆಯಾಗಿ ₹58,454 ಆಗಿದೆ. 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 440 ರೂಪಾಯಿ ಕಡಿಮೆಯಾಗಿ ₹53,540 ಆಗಿದೆ. 1 ಕೆ.ಜಿ ಬೆಳ್ಳಿ ಬೆಲೆ 627 ರೂಪಾಯಿ ಕಡಿಮೆಯಾಗಿ ₹70,930 ಆಗಿದೆ. -masthmagaa.com Share on: WhatsAppContact Us for AdvertisementRead More →

masthmagaa.com: ಷೇರುಪೇಟೆ ವಿಚಾರಕ್ಕೆ ಬಂದ್ರೆ, ಸಂವೇದಿ ಸೂಚ್ಯಂಕ 173 ಅಂಕ ಏರಿಕೆ ಕಂಡು 66,118ರಲ್ಲಿ ದಿನದ ವಹಿವಾಟು ಅಂತ್ಯಗೊಳಿಸಿದೆ. ಇತ್ತ ನಿಫ್ಟಿ 51 ಅಂಕ ಏರಿಕೆ ಕಂಡು 19,716 ಆಗಿದೆ. ಡಾಲರ್ ಮುಂದೆ ರೂಪಾಯಿ ಮೌಲ್ಯ 05 ಪೈಸೆ ಏರಿಕೆ ಕಂಡು 83.21 ಆಗಿದೆ. (83 ರೂಪಾಯಿ 21 ಪೈಸೆ). -masthmagaa.com Share on: WhatsAppContact Us for AdvertisementRead More →

masthmagaa.com: 2024ರ ಆಸ್ಕರ್ ಪ್ರಶಸ್ತಿಗಾಗಿ ಭಾರತದಿಂದ ಸ್ಪರ್ಧಿಸಲು ಮಲಯಾಳಂನ `2018- Everyone is a hero’ ಸಿನಿಮಾ ಅಧಿಕೃತವಾಗಿ ಪ್ರವೇಶ ಪಡಿದಿದೆ. ಈ ವಿಷಯನ್ನು ಇಂದು ಚೆನ್ನೈನಲ್ಲಿ ಫಿಲ್ಮ್‌ ಫೆಡರೇಷನ್‌ ಆಫ್ ಇಂಡಿಯಾ ಪ್ರಕಟಿಸಿದ್ದು, 16 ಜನ ಜ್ಯೂರಿಗಳಿರುವ ತಂಡ 2018 ಸಿನಿಮಾವನ್ನು ಅವಿರೋಧವಾಗಿ ಆಯ್ಕೆ ಮಾಡಿದೆ ಅಂತ ಆಯ್ಕೆ ಸಮಿತಿ ಅಧ್ಯಕ್ಷ ಗಿರೀಶ್ ಕಾಸರವಳ್ಳಿ ತಿಳಿಸಿದ್ದಾರೆ. 2024ರ ಆಸ್ಕರ್ ಪ್ರಶಸ್ತಿಯ ‘ಅತ್ಯುತ್ತಮ ಅಂತರರಾಷ್ಟ್ರೀಯ ವೈಶಿಷ್ಟ್ಯದ ಚಿತ್ರ’ ವಿಭಾಗಕ್ಕೆ 2018 ಸಿನಿಮಾವನ್ನು ಕಳುಹಿಸಿಕೊಡಲಾಗಿದೆ ಅಂತ ಹೇಳಿದ್ದಾರೆ. -masthmagaa.com Share on: WhatsAppContact Us for AdvertisementRead More →

masthmagaa.com: ಗೋವುಗಳ ಸಾಕಾಣಿಕೆ ಹೆಸರಿನಲ್ಲಿ ಅವುಗಳನ್ನು ಕಸಾಯಿಖಾನೆಗೆ ಮಾರಾಟ ಮಾಡುವ ಮೂಲಕ ದೇಶದಲ್ಲಿ ಇಸ್ಕಾನ್ ಅತಿ ದೊಡ್ಡ ವಂಚನೆ ಮಾಡ್ತಿದೆ ಅಂತ ಬಿಜೆಪಿ ಸಂಸದೆ ಮನೇಕಾ ಗಾಂಧಿ ಆರೋಪಿಸಿದ್ದಾರೆ. ಮೇನಕಾ ಗಾಂಧಿ ಅವರು ಇಸ್ಕಾನ್ ಮೇಲೆ ಮಾಡಿರುವ ಗಂಭೀರ ಆರೋಪದ ವೀಡಿಯೋ ವೈರಲ್ ಆಗಿದೆ. ಈ ದೇಶದಲ್ಲಿ ಅತೀ ದೊಡ್ಡ ಮೋಸಗಾರರು ಅಂದ್ರೆ ಅದು ಇಸ್ಕಾನ್. ಇವರು ಗೋ ಶಾಲೆಗಳನ್ನು ನಡೆಸಲು ಸರ್ಕಾರದಿಂದ ಬೇಕಾದ ಸೌಲಭ್ಯ, ದೊಡ್ಡ ದೊಡ್ಡ ಜಮೀನುಗಳು, ಗೋಮಾಳಗಳು ಎಲ್ಲ ವ್ಯವಸ್ಥೆ ಸಿಗುತ್ತವೆ. ಇತ್ತೀಚೆಗಷ್ಟೇ ನಾನು ಇಸ್ಕಾನ್‌ನ ಅನಂತಪುರದ ಗೋ ಶಾಲೆಗೆ ಭೇಟಿ ನೀಡಿದ್ದೆ. ಅಲ್ಲಿ ಹಾಲು ಕೊಡದ ಒಂದೇ ಒಂದು ಹಸುವಾಗಲಿ ಇಲ್ಲವೇ ಕರುಗಳಾಲಿ ಇರಲಿಲ್ಲ. ಯಾಕಂದ್ರೆ ಎಲ್ಲಾ ಕರುಗಳು ಹಾಗೂ ಹಸುಗಳನ್ನ ಮಾರಾಟ ಮಾಡಲಾಗಿದೆ ಅಂತ ಆರೋಪಿಸಿದ್ದಾರೆ. ಬೀದಿ ಬೀದಿಗಳಲ್ಲಿ ಹರೇ ರಾಮ್- ಹರೇ ಕೃಷ್ಣ ಎಂದು ಹೇಳಿಕೊಂಡು ಅಡ್ಡಾಡುವ ಇವರು ಹಾಲಿನಲ್ಲೇ ಅವರ ಜೀವನವಿದೆ ಎಂಬಂತೇ ಹೇಳಿಕೊಳ್ಳುತ್ತಾರೆ. ಆದರೆ ಇಸ್ಕಾನ್ ಅವರು ಕಸಾಯಿಖಾನೆಗೆ ಮಾರಿದಷ್ಟು ಗೋವುಗಳನ್ನ ಬೇರೆ ಯಾರೂ ಮಾರಿರೋಕೆ ಸಾಧ್ಯವೇRead More →

masthmagaa.com: ಈಶಾನ್ಯ ರಾಜ್ಯ ಮಣಿಪುರದಲ್ಲಿ ಇಬ್ಬರು ವಿದ್ಯಾರ್ಥಿಗಳ ಹತ್ಯೆ ಕೇಸ್‌ಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಪ್ರತಿಭಟನೆ ಇಂದು ಕೂಡ ಮುಂದುವರೆದಿದೆ. ಪ್ರತಿಭಟನಾನಿರತ ವಿದ್ಯಾರ್ಥಿಗಳು ಮಣಿಪುರ ಸಿಎಂ ಎನ್‌. ಬಿರೇನ್‌ ಸಿಂಗ್‌ ಅವ್ರು ನಿವಾಸದ ಬಳಿ ಮೆರವಣಿಗೆ ನಡೆಸಿದ್ದಾರೆ. ಈ ವೇಳೆ ಗುಂಪನ್ನ ಚದುರಿಸಲು ಪೊಲೀಸರು ಅಶ್ರುವಾಯು ಹಾಗೂ ಹೊಗೆ ಸ್ಫೋಟಕಗಳನ್ನ ಬಳಸಿದ್ದಾರೆ. ಇನ್ನು ಮಣಿಪುರದಲ್ಲಿ ಉಂಟಾಗಿರುವ ಉದ್ವಿಗ್ನತೆ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಪೊಲೀಸ್‌, CRPF, RPF ಹೆಚ್ಚಿನ ಸಿಬ್ಬಂದಿಯನ್ನ ನಿಯೋಜಿಸಲಾಗಿದೆ ಅಂತ ಅಧಿಕಾರಿಗಳು ತಿಳಿಸಿದ್ದಾರೆ. ಜೊತೆಗೆ ಕಾನೂನು ಸುವವ್ಯಸ್ಥೆ ದೃಷ್ಟಿಯಿಂದ ಸೆಪ್ಟೆಂಬರ್‌ 27ರಿಂದ 29ರವರೆಗೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಅಷ್ಟೆ ಅಲ್ದೆ ತಪ್ಪು ಮಾಹಿತಿ ಮತ್ತು ರೂಮರ್ಸ್‌ಗಳು ಹರಡದಣತೆ ತಡೆಯಲು ಮತ್ತೆ ಅಕ್ಟೋಬರ್‌ 1ರವರೆಗೆ ಇಂಟರ್‌ನೆಟ್‌ ಸೇವೆಗಳನ್ನ ಬ್ಯಾನ್‌ ಮಾಡಲಾಗಿದೆ. ಇನ್ನು ಈ ಕೇಸ್‌ನ್ನ ಸಿಬಿಐಗೆ ಹಸ್ತಾಂತರಿಸಲಾಗಿದ್ದು, ದುಷ್ಕರ್ಮಿಗಳ ಪತ್ತೆಗಾಗಿ ಕೇಂದ್ರ ಗೃಹ ಮಂತ್ರಿ ಅಮಿತ್‌ ಶಾ ಅವರ ಜೊತೆ ಸಂಪರ್ಕದಲ್ಲಿದ್ದೇವೆ ಅಂತ ಬಿರೇನ್‌ ಸಿಂಗ್‌ ಹೇಳಿದ್ದಾರೆ. Share on: WhatsAppContact Us for AdvertisementRead More →

masthmagaa.com: ಇನ್ನು ಚಿನ್ನ, ಬೆಳ್ಳಿ ವಿಚಾರಕ್ಕೆ ಬಂದ್ರೆ 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 196 ರೂಪಾಯಿ ಕಡಿಮೆಯಾಗಿ ₹58,933 ಆಗಿದೆ. 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 180 ರೂಪಾಯಿ ಕಡಿಮೆಯಾಗಿ ₹53,980 ಆಗಿದೆ. 1 ಕೆ.ಜಿ ಬೆಳ್ಳಿ ಬೆಲೆ 1,458 ರೂಪಾಯಿ ಕಡಿಮೆಯಾಗಿ ₹71,557 ಆಗಿದೆ. -masthmagaa.com Share on: WhatsAppContact Us for AdvertisementRead More →

masthmagaa.com: ಷೇರುಪೇಟೆ ವಿಚಾರಕ್ಕೆ ಬಂದ್ರೆ, ಸಂವೇದಿ ಸೂಚ್ಯಂಕ 78 ಅಂಕ ಇಳಿಕೆ ಕಂಡು 65,945ರಲ್ಲಿ ದಿನದ ವಹಿವಾಟು ಅಂತ್ಯಗೊಳಿಸಿದೆ. ಇತ್ತ ನಿಫ್ಟಿ 10 ಅಂಕ ಇಳಿಕೆ ಕಂಡು 19,664 ಆಗಿದೆ. ಡಾಲರ್ ಮುಂದೆ ರೂಪಾಯಿ ಮೌಲ್ಯ 13 ಪೈಸೆ ಇಳಿಕೆ ಕಂಡು 83.26 ಆಗಿದೆ. (83 ರೂಪಾಯಿ 26 ಪೈಸೆ). -masthmagaa.com Share on: WhatsAppContact Us for AdvertisementRead More →