masthmagaa.com: ರಾಜ್ಯದಲ್ಲಿ ಕಾವೇರಿ ಹೋರಾಟಗಳು ಮುಂದುವರೆದಿವೆ. ಇದೀಗ ತಮಿಳುನಾಡಿಗೆ ನೀರು ಬಿಡುತ್ತಿರುವ ಕರ್ನಾಟಕ ಸರ್ಕಾರದ ವಿರುದ್ಧ ಇಂದು ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಘೋಷಣೆ ಕೂಗಿದ್ದು, ಇವರು ಡಿಎಂಕೆ ಏಜೆಂಟ್‌ಗಳು ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಮಾತಾಡಿರುವ ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ, ನಮ್ಮ ಬಹುತೇಕ ಎಲ್ಲಾ ಜಲಾಶಯಗಳಲ್ಲಿ ನೀರಿಲ್ಲ. ಕುಡಿಯುವ ಉದ್ದೇಶಕ್ಕೂ ಇರುವ ನೀರು ನಮಗೆ ಸಾಕಾಗುತ್ತಿಲ್ಲ. ಈ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿದ್ದು, ಪ್ರಧಾನಿ ಇದರಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಅಂತ ಹೇಳಿದ್ದಾರೆ. ಜೊತೆಗೆ ಸಿಎಂ ಹಾಗೂ ಡಿಸಿಎಂ ತಮಿಳುನಾಡಿನ ಏಜೆಂಟರಂತೆ ವರ್ತಿಸುತ್ತಿರುವುದರಿಂದ ಕರ್ನಾಟಕ ಬಿಕ್ಕಟ್ಟು ಎದುರಿಸುತ್ತಿದೆ ಅಂತ ಆರೋಪಿಸಿದ್ದಾರೆ. ಇತ್ತ ಕಾವೇರಿ ನೀರು ಬಿಡುವಂತೆ ಪ್ರಾಧಿಕಾರ ನೀಡಿರೋ ಆದೇಶದ ವಿರುದ್ದ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸ್ತೀವಿ ಅಂತ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅಕ್ಟೋಬರ್ 15ರವರೆಗೆ ಪ್ರತಿದಿನ 3 ಸಾವಿರ ಕ್ಯೂಸೆಕ್ ನೀರು ಬಿಡಲು ಕಾವೇರಿ ಪ್ರಾಧಿಕಾರ ಆದೇಶಿಸಿದೆ. ನಾನು ವಕೀಲರೊಂದಿಗೆ ಮಾತನಾಡಿದ್ದೇನೆ. ಅವರುRead More →

masthmagaa.com: ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ವಿಚಾರ ಅಧಿಕೃತವಾಗಿ ಹೊರ ಬೀಳ್ತಿದ್ದಂಗೆ ಉಭಯ ಪಕ್ಷಗಳಲ್ಲಿನ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಅಸಮಾಧಾನ ಹೊರಹಾಕುತ್ತಿದ್ದಾರೆ. ಇದೀಗ ಯಶವಂತಪುರ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಮತ್ತು ಜೆಡಿಎಸ್ ಎರಡೂ ಪಕ್ಷಗಳ ಸ್ಥಳೀಯ ನಾಯಕರು ಇಂದು ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ. ಇತ್ತ ಬಿಜೆಪಿ ಜೊತೆ ಜೆಡಿಎಸ್‌ ಮೈತ್ರಿ ಆದ ತಕ್ಷಣ ಮುಸ್ಲಿಮರನ್ನು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ. ನಾನಿನ್ನೂ ಬದುಕಿದ್ದೇನೆ, ಮುಸ್ಲಿಂ ಸಮುದಾಯವನ್ನ ನಮ್ಮ ಜೊತೆ ಉಳಿಸಿಕೊಳ್ಳುತ್ತೇವೆ. ಈ ಬಗ್ಗೆ ಯಾವ ಆತಂಕ ಕೂಡ ಬೇಡ ಅಂತ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಹೇಳಿದ್ದಾರೆ. ಜೊತೆಗೆ ಈ ಮೈತ್ರಿ ಮಾಡಿಕೊಳ್ಳುವಂತೆ ಮಾಜಿ ಸಿಎಂ ಕುಮಾರಸ್ವಾಮಿಯವರಿಗೆ ಸಲಹೆ ನೀಡಿದ್ದು ನಾನೇ ಅಂತ ದೇವೇಗೌಡರು ಹೇಳಿದ್ದಾರೆ. ಇದೇ ವೇಳೆ ಮಾತಾಡಿರುವ ಕುಮಾರಸ್ವಾಮಿ, 2018 ರಲ್ಲಿ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ,‌ಡಿಕೆ ಶಿವಕುಮಾರ್, ಪರಮೇಶ್ವರ್ ಇದ್ರು. ನಮ್ಮ ಪಕ್ಷಕ್ಕೆ ನನ್ನ ಮಗನಿಗೆ ಸಿಎಂ ಸ್ಥಾನ ಬೇಡ ಎಂದುRead More →

masthmagaa.com: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರೋದನ್ನು ಖಂಡಿಸಿ ರೈತ ಹಾಗೂ ಕನ್ನಡ ಪರ ಸಂಘಟನೆಗಳು ಬೆಂಗಳೂರು ಬಂದ್ ಮಾಡಿ ಆಕ್ರೋಶ ಹೊರಹಾಕ್ತಿವೆ. ಇದರ ನಡುವೆಯೇ ರಾಜ್ಯಕ್ಕೆ ಮತ್ತೆ ಸಂಕಷ್ಟ ಎದುರಾಗಿದೆ. ದಿಲ್ಲಿಯ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ (CWRC) ಇಂದು ಮತ್ತೆ ಸಭೆ ನಡೆಸಿದೆ. ಈ ವೇಳೆ ತಮಿಳುನಾಡಿಗೆ ಮುಂದಿನ 18 ದಿನಗಳ ಕಾಲ ಅಂದ್ರೆ ಸೆಪ್ಟಂಬರ್‌ 28ರಿಂದ ಅಕ್ಟೋಬರ್‌ 15ರವರೆಗೆ ಪ್ರತಿ ದಿನ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಿದೆ. ಇದರೊಂದಿಗೆ ಕರ್ನಾಟಕದಲ್ಲಿ ಪ್ರತಿಭಟನೆಯ ಕಿಚ್ಚು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ದಟ್ಟವಾಗಿದೆ. ಆದ್ರೆ ಈ ಬಾರಿಯ ಆದೇಶ ಕರ್ನಾಟಕಕ್ಕೆ ತುಸು ಸಮಾಧಾನ ತಂದಿದೆ. ಯಾಕಂದ್ರೆ ಹಿಂದಿನ ಆದೇಶಗಳಿಗಿಂತ ಕಡಿಮೆ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡುವಂತೆ ಆದೇಶಿಸಲಾಗಿದೆ. ಆದೇಶಕ್ಕೆ ಪ್ರತಿಕ್ರಿಯಿಸಿರೊ ಡಿಸಿಎಂ ಡಿಕೆ ಶಿವಕುಮಾರ್‌, ತಮಿಳುನಾಡು ಸರ್ಕಾರ 12 ಸಾವಿರ ಕ್ಯೂಸೆಕ್‌ ನೀರು ಬಿಡುಗಡೆ ಬೇಕು ಅಂತ ಕೇಳಿತ್ತು‌.‌ ಆದ್ರೆ ಅಷ್ಟು ನೀರು ಬಿಡಲು ಆಗಲ್ಲ ಅಂತ ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಇದ್ರಿಂದRead More →

masthmagaa.com: ನದಿ ವಿವಾದದಲ್ಲಿ ರಾಜ್ಯದ ಪರವಾಗಿ ವಾದ ಮಂಡಿಸೋಕೆ ವಕೀಲರಿಗಾಗಿ ರಾಜ್ಯ ಸರ್ಕಾರ 122.76 ಕೋಟಿ ರೂಪಾಯಿ ಪಾವತಿಸಿದೆ ಅಂತ ಮಾಹಿತಿ ಗೊತ್ತಾಗಿದೆ. ಕಾವೇರಿ, ಕೃಷ್ಣಾ ಹಾಗೂ ಮಹದಾಯಿ ನದಿ ವಿವಾದಗಳ ವಿಚಾರಣೆ ವೇಳೆ ವಕೀಲರಿಗಾಗಿ ಖರ್ಚಾಗಿರೋ ಹಣದ ಬಗ್ಗೆ ಮಾಹಿತಿ ಹಕ್ಕು ಕಾರ್ಯಕರ್ತರೊಬ್ಬರು ಹೇಳಿದ್ದಾರೆ. ಕರ್ನಾಟಕ, ತಮಿಳುನಾಡು, ಕೇರಳ ಹಾಗೂ ಪುದುಚೆರಿ ರಾಜ್ಯಗಳ ನಡುವಿನ ಜಲ ವಿವಾದದ ಇತ್ಯರ್ಥಕ್ಕೆ 1990ರಲ್ಲಿ ಕಾವೇರಿ ಜಲವಿವಾದ ನ್ಯಾಯಮಂಡಳಿ ರಚಿಸಲಾಗಿದೆ. ಅಲ್ಲಿಂದ 2017ರ ಜುಲೈವರೆಗೆ ಒಟ್ಟು 580 ಸೀಟಿಂಗ್‌ಗಳು ನಡೆದಿವೆ. ಈ ಪ್ರಕರಣಗಳಲ್ಲಿ ರಾಜ್ಯದ ಪರವಾಗಿ ವಾದ ಮಂಡಿಸಿದ ವಕೀಲರಿಗೆ 54.13 ಕೋಟಿಗೂ ಅಧಿಕ ಶುಲ್ಕ ನೀಡಲಾಗಿದೆ. ಇನ್ನು 2004ರಲ್ಲಿ ಕರ್ನಾಟಕ, ಮಹಾರಾಷ್ಟ್ರ ಹಾಗೂ ಆಂಧ್ರ ಪ್ರದೇಶಗಳ ನಡುವಿನ ಜಲವಿವಾದ ಬಗೆಹರಿಸೋಕೆ ಕೃಷ್ಣ ಜಲವಿವಾದ ನ್ಯಾಯಮಂಡಳಿ ರಚಿಸಲಾಗಿದೆ. ಅಲ್ಲಿಂದ 2013ರವರೆಗೆ 43.24 ಕೋಟಿ ರೂಪಾಯಿ ಪೇ ಮಾಡಲಾಗಿದೆ. ಇನ್ನು ಮಹಾದಾಯಿ ಪ್ರಕರಣದಲ್ಲಿ 25.38 ಕೋಟಿ ರೂಪಾಯಿ ನೀಡಲಾಗಿದೆ ಅಂತ ತಿಳಿಸಿದ್ದಾರೆ. -masthmagaa.com Share on: WhatsAppContact Us for AdvertisementRead More →

masthmagaa.com: ರಾಜ್ಯ ಪಠ್ಯಕ್ರಮದ ಪಠ್ಯಪುಸ್ತಕಗಳ ಪರಿಷ್ಕರಣೆಗೆ 5 ಸಮಿತಿಗಳನ್ನ ರಚಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ. 1 ರಿಂದ 10ನೇ ತರಗತಿವರೆಗಿನ ಕನ್ನಡ ಪ್ರಥಮ ಹಾಗೂ ದ್ವಿತೀಯ ಭಾಷೆ, 9 ಮತ್ತು 10ನೇ ತರಗತಿಯ ಕನ್ನಡ ತೃತೀಯ ಭಾಷೆಯ ಪಠ್ಯ ಪುಸ್ತಕಗಳು ಹಾಗೂ 6 ರಿಂದ 10ನೇ ತರಗತಿಯ ಸಮಾಜ ವಿಜ್ಞಾನ ಪಠ್ಯ ಪುಸ್ತಕಗಳ ಪರಿಷ್ಕರಣೆ ಸಂಬಂಧ ಸಮಿತಿಗಳನ್ನ ರಚಿಸಲಾಗಿದೆ. ಪರಿಷ್ಕರಣೆ ಕುರಿತು ಶೈಕ್ಷಣಿಕ ಮಾರ್ಗದರ್ಶನ ಹಾಗೂ ಸಲಹೆ ನೀಡಲು ಉತ್ತರ ಕನ್ನಡ ಜಿಲ್ಲೆಯ ಡಾ. ಮಂಜುನಾಥ ಜಿ ಹೆಗ್ಡೆ ಅವ್ರನ್ನ ಮುಖ್ಯ ಸಂಯೋಜಕರನ್ನಾಗಿ ನೇಮಿಸಿ ಇಲಾಖೆ ಆದೇಶ ಹೊರಡಿಸಿದೆ. 2024-25ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗುವ ಮೊದಲು ಪಠ್ಯ ಪುಸ್ತಕಗಳು ಸಿದ್ದವಾಗಬೇಕಿವೆ. ಈ ಹಿನ್ನೆಲೆ ಪರಿಷ್ಕರಣೆ ಕಾರ್ಯವನ್ನ ಬೇಗನೇ ಮುಗಿಸಿ ವರದಿ ಸಲ್ಲಿಸುವಂತೆ ರಾಜ್ಯ ಪಠ್ಯಪುಸ್ತಕ ಸಂಘ ಕೋರಿತ್ತು. ಅದ್ರಂತೆ 2005ರ ಮಾರ್ಗಸೂಚಿಯಂತೆ ಪರಿಷ್ಕರಣೆ ನಡೆಸಲು ಸಮಿತಿ ರಚಿಸಲಾಗಿದೆ. ಈ ಸಮಿತಿ ಮುಂದಿನ 3 ತಿಂಗಳಲ್ಲಿ ತನ್ನ ವರದಿ ಸಲ್ಲಿಸಲಿದೆ ಎನ್ನಲಾಗಿದೆ. -masthmagaa.comRead More →

masthmagaa.com: ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಹಿಂದೂಗಳ ಮತಗಳನ್ನ ಸೆಳೆಯಲು ಬಿಜೆಪಿ ರಾಮಮಂದಿರವನ್ನ ಸ್ಫೋಟಿಸಿ ಮುಸ್ಲಿಂರ ಮೇಲೆ ಆರೋಪ ಮಾಡುವ ಸಾಧ್ಯತೆಗಳಿವೆ ಅಂತ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಹೇಳಿದ್ದಾರೆ. ಪಾಟೀಲ್‌ ಈ ರೀತಿ ಹೇಳಿರುವ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಈ ವಿಡಿಯೋವನ್ನ ಶೇರ್‌ ಮಾಡಿರುವ ರಾಜ್ಯ ಬಿಜೆಪಿ ಘಟಕ, ಹಿಂದೂ-ಮಸ್ಲಿಂರ ನಡುವೆ ಕೋಮು ಉದ್ವಿಗ್ನೆತೆಯನ್ನ ಉಂಟು ಮಾಡೋಕೆ ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಅಂತ ಆರೋಪಿಸಿದೆ. -masthmagaa.com Share on: WhatsAppContact Us for AdvertisementRead More →

masthmagaa.com: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ 53 ಸಾವಿರ ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗಿಲ್ಲ. ಹೀಗಾಗಿ ಪ್ರತಿನಿತ್ಯ ಮಹಿಳೆಯರು, ಬ್ಯಾಂಕು, ಸೇವಾ ಕೇಂದ್ರಗಳಿಗೆ ಅಲೆದಾಡುವಂತಾಗಿದೆ ಅಂತ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು, ಬ್ಯಾಂಕ್ ಖಾತೆ ಸಂಖ್ಯೆ ತಪ್ಪಾಗಿದ್ದರೆ, ಆಧಾರ್ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆ ಜೋಡಣೆ ಆಗಿರದಿದ್ದರೆ, ಬ್ಯಾಂಕ್ ಖಾತೆ ನಿಷ್ಕ್ರಿಯವಾಗಿದ್ದರೆ ಮತ್ತು ಬೇರೆ ಬೇರೆ ತಾಂತ್ರಿಕ ಕಾರಣಗಳಿಂದ ಹಣ ಪಾವತಿ ಆಗುವುದಿಲ್ಲ. ಹೀಗಾಗಿ ಹಣ ಜಮಾ ಆಗದವರು ತಮ್ಮ ಬ್ಯಾಂಕ್ ಖಾತೆ ಮತ್ತು ದಾಖಲೆಗಳನ್ನು ಪುನರ್ ಪರಿಶೀಲಿಸಿಕೊಳ್ಳಬೇಕು ಅಂತ ತಿಳಿಸಿದ್ದಾರೆ. -masthmagaa.com Share on: WhatsAppContact Us for AdvertisementRead More →

masthmagaa.com: ಆಂಧ್ರಪ್ರದೇಶದ ಹಿಂದೂಪುರದಿಂದ ಬೆಂಗಳೂರಿಗೆ ಅಕ್ರಮವಾಗಿ ಗೋಮಾಂಸ ಸಾಗಾಣಿಕೆ ಮಾಡುತ್ತಿದ್ದ ವಾಹನಗಳನ್ನು ಶ್ರೀರಾಮಸೇನೆ ಸಂಘಟನೆ ಕಾರ್ಯಕರ್ತರು ತಡೆದು, ಒಂದು ಕಾರಿಗೆ ಬೆಂಕಿ ಹಚ್ಚಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಘಟನೆಯಲ್ಲಿ ಕಾರು ಸಂಪೂರ್ಣ ಸುಟ್ಟು ಹೋಗಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಗೋಮಾಂಸ ಸಾಗಿಸುತ್ತಿದ್ದ ವಾಹನ ಚಾಲಕರ ತಲೆಯ ಮೇಲೆ ಗೋಮಾಂಸವನ್ನು ಇಟ್ಟು ಮೆರವಣಿಗೆ ಮಾಡಲಾಗಿರುವ ಪೋಟೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಅಗಿವೆ. ಇನ್ನು ಈ ಘಟನೆಯಿಂದ ಸ್ಥಳದಲ್ಲಿ ಉಂಟಾಗಿದ್ದ ಉದ್ವಿಗ್ನ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಗುಂಪು ಗೂಡಿದ್ದ ಜನರನ್ನು ಚದುರಿಸಿದ್ದಾರೆ. ಜೊತೆಗೆ ಗೋ ಮಾಂಸ ಸಾಗಾಣಿಕೆ ಮಾಡುತ್ತಿದ್ದ ಐದು ವಾಹನ ಹಾಗೂ ಚಾಲಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. -masthmagaa.com Share on: WhatsAppContact Us for AdvertisementRead More →

masthmagaa.com: ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ. ರೈತರು, ವಿವಿಧ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ನಿನ್ನೆ ಮಂಡ್ಯ ಮದ್ದೂರು ಬಂದ್‌ ಮಾಡಿ ರೈತರು ಕಿಡಿಕಾರಿದ್ದರು. ಇದೀಗ ಸೆಪ್ಟೆಂಬರ್‌ 26ರಂದು ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದ್ದು, ಬಹುತೇಕ ಸಂಘಟನೆಗಳು ಬೆಂಬಲ ಸೂಚಿಸಿವೆ. ಇತ್ತ ಬೆಂಗಳೂರು ಬಂದ್​ಗೆ ನಮ್ಮ‌ ಸಂಪೂರ್ಣ ಬೆಂಬಲ ಇರುತ್ತೆ ಅಂತ ಕೆಎಸ್​ಆರ್​​ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಫೆಡರೇಶನ್ ಅಧ್ಯಕ್ಷ ಅನಂತ್ ಸುಬ್ಬರಾವ್ ತಿಳಿಸಿದ್ದಾರೆ. ಜೊತೆಗೆ ಬಿಎಂಟಿಸಿ ಸಾರಿಗೆ ಸಿಬ್ಬಂದಿ ಕೂಡ ಬಂದ್​ಗೆ ಬೆಂಬಲಿಸಲಿದ್ದಾರೆ ಅಂತ ತಿಳಿಸಿದ್ದಾರೆ. ಅತ್ತ ಬಂದ್​ಗೆ ಖಾಸಗಿ ಸಾರಿಗೆ ಸಂಘಟನೆಗಳು ಬೆಂಬಲ ಸೂಚಿಸಿವೆ. ಜೊತೆಗೆ ಓಲಾ, ಉಬರ್ ಸಂಘದಿಂದಲೂ ಬೆಂಬಲ ವ್ಯಕ್ತವಾಗಿದೆ. ಇನ್ನು ಬಂದ್‌ಗೆ ಖಾಸಗಿ ಶಿಕ್ಷಣ ಸಂಸ್ಥೆಗಳು ನೈತಿಕ ಬೆಂಬಲ ನೀಡಿದ್ದು, ಮಕ್ಕಳ ಹಿತದೃಷ್ಠಿಯಿಂದ ಸರ್ಕಾರವೇ ಶಾಲೆಗೆ ರಜೆ ನೀಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿ ಅಂತ ಹೇಳಿವೆ. -masthmagaa.com Share on: WhatsAppContact Us for AdvertisementRead More →

masthmagaa.com: ಮುಂಬರುವ ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಕಾಂಗ್ರೆಸ್‌ ರಾಜ್ಯದಲ್ಲಿ ಅಧಿಕೃತವಾಗಿ ಸಿದ್ಧತೆ ಆರಂಭಿಸಿದೆ. ಈ ಹಿನ್ನಲೆಯಲ್ಲಿ 28 ಜನ ಸಚಿವರನ್ನ ಕ್ಷೇತ್ರಗಳ ವೀಕ್ಷಕರಾಗಿ ನೇಮಕ ಮಾಡಲಾಗಿದ್ದು, ಕ್ಷೇತ್ರಗಳಲ್ಲಿ ಸಭೆ ನಡೆಸಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ದಪಡಿಸಲು ಸೂಚನೆ ನೀಡಲಾಗಿದೆ. 28 ಲೋಕಸಭಾ ಕ್ಷೇತ್ರಗಳಿಗೆ 28 ಸಚಿವರನ್ನು ವೀಕ್ಷಕರನ್ನಾಗಿ ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್‌ ಅವರು ಆದೇಶ ಹೊರಡಿಸಿದ್ದಾರೆ. ಪ್ರತಿ ಕ್ಷೇತ್ರದಲ್ಲೂ 2 ಅಥವಾ 3 ಅಭ್ಯರ್ಥಿಗಳ ಹೆಸರನ್ನು ಫೈನಲ್‌ ಮಾಡಲು ಜವಾಬ್ದಾರಿ ನೀಡಲಾಗಿದೆ. ಇನ್ನು ಆಯಾ ಕ್ಷೇತ್ರಗಳಿಗೆ ನೇಮಕಗೊಂಡ ವೀಕ್ಷಕರು ತಮಗೆ ನೀಡಿರುವ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಂಡು ಸಂಭಾವ್ಯ ಅಭ್ಯರ್ಥಿಗಳ ಮಾಹಿತಿಯನ್ನು ಸಂಗ್ರಹಿಸಿ, ಕೆಪಿಸಿಸಿಗೆ ವರದಿ ನೀಡಲು ಸೂಚಿಸಲಾಗಿದೆ. -masthmagaa.com Share on: WhatsAppContact Us for AdvertisementRead More →