ಕಾವೇರಿ ಕಿಚ್ಚು: ರಾಜ್ಯಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು

masthmagaa.com:

ರಾಜ್ಯದಲ್ಲಿ ಮತ್ತೊಮ್ಮೆ ಕಾವೇರಿ ನೀರಿಗಾಗಿ ಜನ ಬೀದಿಗಳಿಗಿದ್ದಾರೆ. ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವಂತೆ ಸುಪ್ರೀಂಕೋರ್ಟ್‌ ಆದೇಶದ ಹಿನ್ನಲೆಯಲ್ಲಿ ರಾಜ್ಯಾದ್ಯಾಂತ ಪ್ರತಿಭಟನೆಗಳ ಭುಗಿಲೆದ್ದಿವೆ. ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿ ಮಂಡ್ಯದಲ್ಲಿ ರೈತರು ಪ್ರತಿಭಟನೆ ನಡೆಸಿದ್ದಾರೆ. ಈ ಪ್ರತಿಭಟನೆಯಲ್ಲಿ ನಟ ಅಭಿಷೇಕ್‌ ಅಂಬರೀಷ್‌ ಹಾಗೂ ನಿರ್ಮಲಾನಂದ ಸ್ವಾಮೀಜಿ ಪಾಲ್ಗೊಂಡಿದ್ದಾರೆ. ಇತ್ತ ರಾಜ್ಯದ ಮೂಲೆ ಮೂಲೆಗಳಲ್ಲಿ ರೈತರು, ಕನ್ನಡಪರ ಸಂಘಟನೆಗಳು ರಸ್ತೆಗಿಳಿದು ಪ್ರತಿಭಟನೆ ಮಾಡುತ್ತಿವೆ. ಜೊತೆಗೆ ಸೆಪ್ಟೆಂಬರ್ 23 ಅಂದ್ರೆ ನಾಳೆ ಮಂಡ್ಯ ಬಂದ್​ಗೆ ರೈತ ಸಂಘಟನೆಗಳು ಕರೆ ಕೊಟ್ಟಿವೆ. ಇನ್ನೊಂದ್‌ ಕಡೆ ನಾಳೆ ರಾಜ್ಯ ಸಂಸದರ ಮನೆಗಳಿಗೆ ಮುತ್ತಿಗೆ ಹಾಕಲು ಕರ್ನಾಟಕ ರಕ್ಷಣಾ ವೇದಿಕೆ ನಿರ್ಧರಿಸಿದೆ. ಈ ಬಗ್ಗೆ ಮಾತಾಡಿರುವ ಕರವೇ ಯುವ ಘಟಕದ ರಾಜ್ಯಾಧ್ಯಕ್ಷ ಧರ್ಮರಾಜ್ ಗೌಡ, ಕನ್ನಡಿಗರ ಮರಣ ಶಾಸನವನ್ನ ನಾವು ಸುಮ್ಮನೇ ನೋಡಿ‌ ಕೂರಲು ಆಗಲ್ಲ. ನಮ್ಮ ಕಾವೇರಿಯ ರಕ್ಷಣೆಯನ್ನ ನಾವೇ ಮಾಡಬೇಕು. ಕೂಡಲೇ ಕಾವೇರಿ‌ ನೀರನ್ನ ಹರಿಸೋದನ್ನ ನಿಲ್ಲಿಸಬೇಕು ಅಂತ ಆಗ್ರಹಿಸಿದ್ದಾರೆ. ಅತ್ತ ದಾವಣಗೆರೆಯಲ್ಲಿ ಕರವೇ ಕಾರ್ಯಕರ್ತರು ಸಂಸದ ಜಿಎಂ‌. ಸಿದ್ದೇಶ್ವರ ಕಚೇರಿಗೆ ಮುತ್ತಿಗೆ ಹಾಕಿ‌‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

-masthmagaa.com

Contact Us for Advertisement

Leave a Reply