masthmagaa.com:
ತಮಿಳುನಾಡಿಗೆ ಕಾವೇರಿ ನೀರು ಬಿಡಲು ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರು ಪ್ರತಿಭಟನೆ ನಡೆಸಿದ್ದಾರೆ. ಕೆಆರ್ಎಸ್ ಡ್ಯಾಮ್ ಬಳಿ ಕಣ್ಣಿಗೆ ಕಪ್ಪು ಪಟ್ಟಿ ಧರಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಮಂಡ್ಯದ ಕೆಆರ್ಎಸ್ ಜಲಾಶಯದ ಬಳಿ ಜಮಾಯಿಸಿದ್ದ ಭೂಮಿತಾಯಿ ಹೋರಾಟ ಸಮಿತಿ ಸದಸ್ಯರು, ರೈತ ನಾಯಕರು, ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಘೋಷಣೆ ಕೂಗಿದ್ದಾರೆ. ಈ ವೇಳೆ ಸರ್ಕಾರ ರೈತರೊಂದಿಗೆ ಚೆಲ್ಲಾಟ ಆಡುತ್ತಿದೆ. ಈಗಾಗಲೇ ತಮಿಳುನಾಡಿಗೆ ಒಂದುವರೆ ಲಕ್ಷ ಕ್ಯೂಸೆಕ್ ನೀರನ್ನ ಬಿಡಲಾಗಿದೆ. ನಮಗಿಲ್ಲಿ ಕುಡಿಯೋದಕ್ಕೆ ನೀರಿಲ್ಲ. ಆದರೆ ತಮಿಳುನಾಡಿಗೆ ಬೆಳೆ ಬೆಳೆಯಲು ನೀರು ಬಿಡುತ್ತೀರಾ ಅಂತ ರೈತರು ಪ್ರಶ್ನಸಿದ್ದಾರೆ. ಅಂದ್ಹಾಗೆ ತಮಿಳುನಾಡಿಗೆ ಮುಂದಿನ 15 ದಿನಗಳವರೆಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಬಿಡ್ಬೇಕು ಅಂತ ಕಾವೇರಿ ಪ್ರಾಧಿಕಾರ ಆದೇಶ ನೀಡಿದೆ.
-masthmagaa.com
Contact Us for Advertisement