masthmagaa.com:
ತಮಿಳುನಾಡಿಗೆ ಕಾವೇರಿ ನದಿ ಹರಿಸದಂತೆ ವಿರೋಧಿಸಿ ಇಂದು ಕೂಡ ರಾಜ್ಯದ ಹಲವೆಡೆ ಪ್ರತಿಭಟನೆ ನಡೆಸಲಾಗಿದೆ. ಅಕ್ಟೋಬರ್ 15ರವರೆಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ಪ್ರಾಧಿಕಾರ ಮಾಡಿರುವ ಆದೇಶವನ್ನ ಖಂಡಿಸಿ ಇಂದು ಮಂಡ್ಯದಲ್ಲಿ ಪ್ರತಿಭಟನೆ ಮಾಡಲಾಗಿದೆ. ಇತ್ತ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಕೂಡ ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೊಂದ್ ಕಡೆ ಕಾವೇರಿ ನದಿ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದರು ಪ್ರಧಾನಿಯೊಂದಿಗೆ ಮೌನ ವಹಿಸಿದ್ದಾರೆ ಅಂತ ಸಿಎಂ ಸಿದ್ದರಾಮಯ್ಯ Xನಲ್ಲಿ ಪೋಸ್ಟ್ ಹಾಕಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್, ನಿಮ್ಮ ಸರ್ಕಾರದ ಜವಾಬ್ದಾರಿಯನ್ನ ಕೇಂದ್ರ ಸರ್ಕಾರದ ಮೇಲೆ ಹಾಕೋದು ಒಂದು ಸ್ಮಾರ್ಟ್ ಸ್ಟಾಟಜಿ ಅಂತ ನೀವು ಭಾವಿಸಬಹುದು, ಆದರೆ ಇದು ನಿಮ್ಮ ರಾಜಕೀಯವನ್ನು ಬಹಿರಂಗಪಡಿಸುತ್ತದೆ ಅಂತ ಟೀಕಿಸಿದ್ದಾರೆ. ಅಲ್ದೆ ನಿಮ್ಮ ಇಂಡಿಯಾ ಮೈತ್ರಿ ಕೂಟದ ಡಿಎಂಕೆ ಒತ್ತಡಕ್ಕೆ ಮಣಿದು ನೀರನ್ನು ಬಿಡುಗಡೆ ಮಾಡಿದ್ದೀರಿ ಅಂತ ವಾಗ್ದಾಳಿ ನಡೆಸಿದ್ದಾರೆ.
-masthmagaa.com
Contact Us for Advertisement