ಬರ ಪರಿಹಾರ ವಿಳಂಬಕ್ಕೆ ಕೇಂದ್ರ ಸರ್ಕಾರ ಕಾರಣವಲ್ಲ: ವಿತ್ತ ಸಚಿವೆ!

masthmagaa.com:

ರಾಜ್ಯಕ್ಕೆ ಬರ ಪರಿಹಾರ ನಿಧಿ ಬಿಡುಗಡೆ ವಿಳಂಬವಾಗಲು ಕೇಂದ್ರ ಸರ್ಕಾರ ಕಾರಣವಲ್ಲ ಅಂತ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. ಬರ ಪರಿಹಾರ ನೀಡೊ ಸಂಬಂಧ ಉನ್ನತ ಅಧಿಕಾರಿಗಳ ಸಭೆ ನಡೆಸಲು ಕೇಂದ್ರ ಚುನಾವಣಾ ಆಯೋಗದಿಂದ ಪರ್ಮಿಶನ್‌ ಸಿಗದೇ ಇರೋದು ವಿಳಂಬಕ್ಕೆ ಕಾರಣವಾಗಿದೆ. ಕರ್ನಾಟಕ ಅಷ್ಟೇ ಅಲ್ಲ ಅಸ್ಸಾಂ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಿಗೆ ವಿಪತ್ತು ಪರಿಹಾರ ನಿಧಿ ನೀಡುವ ಪ್ರಸ್ತಾವ ಕೇಂದ್ರದ ಮುಂದಿದೆ. ಚುನಾವಣಾ ಆಯೋಗದ ಅನುಮತಿ ಸಿಕ್ಕ ಬಳಿಕವೇ ಈ ಬಗ್ಗೆ ತೀರ್ಮಾನ ಕೈಗೊಳ್ಳೊಕೆ ಸಾಧ್ಯ. ಹೀಗಾಗಿ ಸಿದ್ದರಾಮಯ್ಯ ಸರ್ಕಾರ ಬರ ಪರಿಹಾರ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ ಅಂತೇಳಿ ಮಾಡ್ತಿರೊ ಆರೋಪದಲ್ಲಿ ಯಾವುದೇ ಹುರುಳಿಲ್ಲ ಅಂತ ಸೀತಾರಾಮನ್‌ ತಿಳಿಸಿದ್ದಾರೆ.

-masthmagaa.com

Contact Us for Advertisement

Leave a Reply