ಕನ್ನಡ ಲೇಖಕರಿಗೆ ಒಲಿದು ಬಂದ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳು!

masthmagaa.com:

ಕನ್ನಡದ ಪ್ರಮುಖ ಸಾಹಿತಿ ಡಾ. ಮೂಡ್ನಾಕೂಡು ಚಿನ್ನಸ್ವಾಮಿ ಹಾಗೂ ಪದ್ಮರಾಜ ದಂಡಾವತಿ ಅವ್ರಿಗೆ ಈ ಬಾರಿಯ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳು ಲಭಿಸಿದೆ. ಚಿನ್ನಸ್ವಾಮಿ ಅವರ ಬಹುತ್ವದ ಭಾರತ ಮತ್ತು ಬೌದ್ಧ ತಾತ್ತ್ವಿಕತೆ ಅನ್ನೊ ಕೃತಿಗೆ ಈ ವರ್ಷದ ʻಪುಸ್ತಕ ಪ್ರಶಸ್ತಿʼ ಬಂದಿದೆ. ದಂಡಾವತಿ ಅವರು ಟ್ರಾನ್ಸ್‌ಲೇಟ್‌ ಮಾಡಿರೊ ಸೀತಾ: ರಾಮಾಯಣದ ಸಚಿತ್ರ ಮರುಕಥನ ಕೃತಿಗೆ ʻಅನುವಾದ ಪ್ರಶಸ್ತಿʼಗೆ ಆಯ್ಕೆಯಾಗಿದೆ. ʻಪುಸ್ತಕ ಪ್ರಶಸ್ತಿʼಯು ಒಂದು ಲಕ್ಷ ರೂ. ಹಾಗೂ ಸನ್ಮಾನ ಒಳಗೊಂಡಿದ್ದರೆ, ಅನುವಾದ ಪ್ರಶಸ್ತಿ 50 ಸಾವಿರ ರೂ ಹಾಗೂ ಸನ್ಮಾನಗಳು ಒಳಗೊಂಡಿದೆ. ಪ್ರಶಸ್ತಿಗಳನ್ನು 2023 ಮಾರ್ಚ್ ತಿಂಗಳಲ್ಲಿ ದಿಲ್ಲಿಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು. ಪ್ರಶಸ್ತಿ ವಿಜೇತರರನ್ನು ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಚಂದ್ರಶೇಖರ ಕಂಬಾರ ಅಭಿನಂದಿಸಿದ್ದಾರೆ.

-masthmagaa.com

Contact Us for Advertisement

Leave a Reply