masthmagaa.com:
ದೆಹಲಿ ಸೇವಾ ವಿಷಯಗಳ ಆಡಳಿತಾತ್ಮಕ ನಿಯಂತ್ರಣ ಕುರಿತು ಕೇಂದ್ರ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಗಳನ್ನ ವಿರೋಧಿಸಿ, ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ವಿಪಕ್ಷ ನಾಯಕರ ಬೆಂಬಲಕ್ಕೆ ಪ್ರಯತ್ನಿಸುತ್ತಿದ್ದಾರೆ. ಆದ್ರೆ ಕೇಜ್ರಿವಾಲ್ರ ಈ ಹೋರಾಟಕ್ಕೆ ಕಾಂಗ್ರೆಸ್ ಬೆಂಬಲ ನೀಡುವ ನಿರ್ಧಾರದಿಂದ ಹಿಂದೆ ಸರಿಯುವ ಸಾಧ್ಯತೆಯಿದೆ ಎನ್ನಲಾಗಿದೆ. ಇನ್ನು ಆಪ್ಗೆ ಸಪೋರ್ಟ್ ಮಾಡುವ ಸಂಬಂಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವ್ರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿದೆ. ಈ ವೇಳೆ ದೆಹಲಿ ಮತ್ತು ಪಂಜಾಬ್ ಅಷ್ಟೇ ಅಲ್ಲ ಎಲ್ಲ ಕಡೆ ಆಪ್ ಕಾಂಗ್ರೆಸ್ಗೆ ಏಟು ಕೊಟ್ಟಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಆಪ್ಗೆ ಸಪೋರ್ಟ್ ಮಾಡ್ಬಾರ್ದು ಅಂತ ಸ್ಥಳೀಯ ಕಾಂಗ್ರೆಸ್ ನಾಯಕರು ಹೇಳಿದ್ದಾರೆ ಎನ್ನಲಾಗಿದೆ. ಇದೇ ವೇಳೆ ನಮ್ಮ ಅಭಿಪ್ರಾಯವನ್ನ ತಿಳಿಸಿದ್ದು, ಅಂತಿಮ ನಿರ್ಧಾರವನ್ನ ಕಾಂಗ್ರೆಸ್ ಹೈಕಮಾಂಡ್ಗೆ ಬಿಟ್ಟಿದ್ದೇವೆ ಅಂತ ಕಾಂಗ್ರೆಸ್ ನಾಯಕ ಅಮರೀಂದರ್ ಸಿಂಗ್ ರಾಜಾ ಹೇಳಿದ್ದಾರೆ.
-masthmagaa.com
Contact Us for Advertisement