ವಿಜಯಪುರ: ಮತಯಂತ್ರಗಳನ್ನ ಪುಡಿಪುಡಿ ಮಾಡಿದ ಗ್ರಾಮಸ್ಥರು, ಯಾಕೆ?

masthmagaa.com:

ಮತದಾನ ಸುಸೂತ್ರವಾಗಿ ನೆರವೇರಲಿ ಅಂತ ಭಾರಿ ಭದ್ರತೆಯನ್ನ ಒದಗಿಸಿದ್ರೂ ರಾಜ್ಯದ ಹಲವು ಕಡೆ ಗಲಾಟೆಗಳು ನಡೆದಿವೆ. ವಿಜಯಪುರದ ಮಸಬಿನಾಳ ಗ್ರಾಮದಲ್ಲಿ ಜನರು ಮತಯಂತ್ರಗಳನ್ನ ಒಡೆದು ಪುಡಿ ಪುಡಿ ಮಾಡಿದ್ದಾರೆ. ಮಶಿನ್‌ಗಳನ್ನ ಪಕ್ಕದ ಬಿಸನಾಳ, ಡೋಣುರ ಗ್ರಾಮಕ್ಕೆ ತೆಗೆದುಕೊಂಡು ಹೋಗ್ತಿದ್ದ ವೇಳೆ ಈ ಘಟನೆ ನಡೆದಿದೆ. ಮತದಾನವನ್ನ ಅರ್ಧಕ್ಕೆ ಸ್ಥಗಿತಗೊಳಿಸಿ ಮಶೀನ್‌ಗಳನ್ನ ವಾಪಸ್ ತಗೊಂಡು ಹೋಗಲಾಗ್ತಿದೆ ಅಂತ ತಪ್ಪಾಗಿ ತಿಳಿದು ಮತ ಯಂತ್ರ ಒಡೆದು ಹಾಕಿದ್ದಾರೆ. ಜೊತೆಗೆ ಅಧಿಕಾರಿಗಳ ಕಾರನ್ನು ಜಖಂಗೊಳಿಸಿ, ಸಿಬ್ಬಂದಿಗಳ ಮೇಲೂ ಹಲ್ಲೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 20 ರಿಂದ 25 ಜನರನ್ನ ವಶಕ್ಕೆ ಪಡೆದುಕೊಳ್ಳಲಾಗಿದೆ ಅಂತ ಅಲ್ಲಿನ ಪೊಲೀಸ್‌ ಅಧಿಕಾರಿಗಳು ಹೇಳಿದ್ದಾರೆ. ಇನ್ನೊಂದ್‌ ಕಡೆ ವರುಣಾ ಕ್ಷೇತ್ರದಲ್ಲಿ ಬಿಜೆಪಿ ನಾಯಕ ವಿ.ಸೋಮಣ್ಣ ಅವರು ಬೂತ್ ಪರಿಶೀಲನೆಗೆ ಆಗಮಿಸಿದ ವೇಳೆ ಕಾಂಗ್ರೆಸ್ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ.

-masthmagaa.com

Contact Us for Advertisement

Leave a Reply