ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಹಂಸಲೇಖ ವಿಚಾರಣೆ: ನಾನು ಬರ್ತೀನಿ ಅಂದ ನಟ ಚೇತನ್ ಅಹಿಂಸಾ!

masthmagaa.com:
ಪೇಜಾವರ ಶ್ರೀಗಳ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನ ನೀಡಿ ಪೊಲೀಸ್ ಕೇಸ್ ಮಾಡಿಕೊಂಡಿದ್ದ ಸಂಗೀತ ನಿರ್ದೇಶಕ ಹಂಸಲೇಖ ಈಗಾಗಲೇ ಎರಡು ಬಾರಿ ಪೊಲೀಸ್ ವಿಚಾರಣೆಗೆ ಹಾಜರಾಗದೇ ತಪ್ಪಿಸಿಕೊಂಡಿದ್ದಾರೆ. ಆದರೆ ಇಂದು ಬಸವನಗುಡಿಯ ಪೊಲೀಸ್ ಠಾಣೆಯಲ್ಲಿ ನಡೆಯಲಿರುವ ವಿಚಾರಣೆಯಲ್ಲಿ ಹಂಸಲೇಖ ಪಾಲ್ಗೊಳ್ಳಬಹುದು ಎಂಬ ನಿರೀಕ್ಷೆ ಇದೆ.
ಇನ್ನು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಸ್ವಘೋಷಿತ ವಾಕ್ಸ್ವಾತಂತ್ರ್ಯಪರ ಹೊರಾಟಗಾರ ಮತ್ತು ನಟ ಚೇತನ್ ಅಹಿಂಸ “ಇವತ್ತು ಬಸವನಗುಡಿಯ ಪೊಲೀಸ್ ಠಾಣೆಯಲ್ಲಿ ನಡೆಯಲಿರುವ ಹಂಸಲೇಖ ಸರ್ ಅವರ ವಿಚಾರಣೆ ಸಮಯದಲ್ಲಿ ನಾನು ಅವರೊಂದಿಗೆ ಠಾಣೆಯಲ್ಲಿ ಒಗ್ಗಟ್ಟಿನಲ್ಲಿ ನಿಲ್ಲುತ್ತೇನೆ.
ನೆನಪಿರಲಿ: ಇದು ವಾಕ್ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಪರ ಹೊರಾಟವಾಗಿದ್ದು, ಸಂವಿಧಾನದ ವಿರೋಧಿಗಳು ಮತ್ತು ಬ್ರಾಹ್ಮಣ್ಯದ ಶಕ್ತಿಗಳು ಇವನ್ನು ಅಪರಾಧೀಕರಿಸುತ್ತಿದ್ದಾರೆ. ನಿಮ್ಮನ್ನೆಲ್ಲ ಅಲ್ಲಿ ಭೇಟಿ ಆಗುತ್ತೇನೆ” ಎಂದು ಬರೆದುಕೊಂಡಿದ್ದಾರೆ. ಜೊತೆಗೆ ಪ್ರಗತಿಪರ ಚಿಂತಕಿ ಅರುಂದತಿ ರಾಯ್ ಅವರ ಮಾತುಗಳಲ್ಲಿ ಎಷ್ಟು ಸತ್ಯ ಇದೆ ತಮ್ಮ ಬರಹದ ಕೊನೆಯಲ್ಲಿ ಹೇಳಿದ್ದಾರೆ.
ಚೇತನ್ ಅಹಿಂಸಾ ಹೇಳಿಕೆಗೆ ಬಜರಂಗದಳದ ಸದಸ್ಯರಿಂದ ಭಾರಿ ವಿರೋಧ ವ್ಯಕ್ತವಾಗಿದೆ.
-masthmagaa.com
Contact Us for Advertisement

Leave a Reply