8 ವರ್ಷದ ನಂತ್ರ ಮತ್ತೆ ಒಂದಾದ ಶಿವಣ್ಣ, ಗುರುದತ್: ಸಂದೇಶ್ ಪ್ರೊಡಕ್ಷನ್ಸ್ ಅಡಿಯಲ್ಲಿ ಸೆಟ್ಟೇರಿದ ಚಿತ್ರ!

masthmagaa.com:

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಹೆಸರಾಂತ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆಯ ಮೂಲಕ ನೂತನ ಚಿತ್ರವೊಂದು ನಿರ್ಮಾಣವಾಗಲಿದೆ. ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅರ್ಪಿಸುವ ಈ ಚಿತ್ರವನ್ನು ಸಂದೇಶ್ ಎನ್ ನಿರ್ಮಿಸುತ್ತಿದ್ದಾರೆ.

ಈಗಾಗಲೇ ಅನೇಕ ಚಿತ್ರಗಳನ್ನು ನಿರ್ದೇಶನ ಮಾಡಿರುವ ಚಿ.ಗುರುದತ್ ನಿರ್ದೇಶನದ ಈ ಚಿತ್ರದ ನಾಯಕರಾಗಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಟಿಸುತ್ತಿದ್ದಾರೆ. ಗುರುದತ್ ಹಾಗೂ ಶಿವರಾಜಕುಮಾರ್ ಅವರು ಆತ್ಮೀಯ ಸ್ನೇಹಿತರು ಹೌದು. ಈ ಹಿಂದೆ ಚಿ. ಗುರುದತ್ ಶಿವರಾಜ್ ಕುಮಾರ್ ಅಭಿನಯದ ಸಮರ ಮತ್ತು ಆರ್ಯನ್ ಚಿತ್ರಗಳನ್ನ ನಿರ್ದೇಶನ ಮಾಡಿದ್ದರು. ಈಗ 8 ವರ್ಷಗಳ ನಂತರ ಮತ್ತೆ ಚಿತ್ರಕ್ಕಾಗಿ ಒಂದಾಗಿದ್ದಾರೆ.

ಈ  ಸಿನಿಮಾದ ತಾರಾಬಳಗ ಹಾಗೂ ತಾಂತ್ರಿಕವರ್ಗದ ಬಗ್ಗೆ ಹೆಚ್ಚಿನ ಮಾಹಿತಿಯನ್ನ ಸದ್ಯದಲ್ಲೇ ನೀಡಲಾಗುವುದು ಎಂದು ನಿರ್ಮಾಪಕ ಸಂದೇಶ್ ನಾಗರಾಜ್ ತಿಳಿಸಿದ್ದಾರೆ.

-masthmagaa.com

Contact Us for Advertisement

Leave a Reply