masthmagaa.com:
ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಧರ್ಮಸ್ಥಳದ ಸೌಜನ್ಯಾ ಮನೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ನಾಗನಗೌಡ ಅವರು ಭೇಟಿ ನೀಡಿ ಕುಟುಂಬದವರ ಜೊತೆ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ಸೌಜನ್ಯಾ ಮೃತದೇಹ ದೊರೆತ ಸ್ಥಳಕ್ಕೂ ಭೇಟಿ ನೀಡಿದ ಸ್ಥಳೀಯ ಪೊಲೀಸರು ಹಾಗೂ ಸೌಜನ್ಯಾ ತಾಯಿ ಕುಸುಮಾವತಿ ಹಾಗೂ ಮಾವ ವಿಠಲ ಗೌಡ ಅವರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕ ಮಾತಾಡಿರುವ ನಾಗನಗೌಡ, ಅನ್ಯಾಯಕ್ಕೊಳಗಾದ ಕುಟುಂಬದ ಪರವಾಗಿ ನಿಲ್ಲುತ್ತೇವೆ. ಕಾನೂನು ಪ್ರಕಾರವಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಆಯೋಗ ಸಿದ್ದವಿದೆ. ಈ ಪ್ರಕರಣದಲ್ಲಿ ಯಾವ ರೀತಿಯಾಗಿ ಆಯೋಗ ಕೆಲಸ ಮಾಡಬಹುದು, ಕಾನೂನು ಪ್ರಕಾರ ಯಾವ ರೀತಿಯಲ್ಲಿ ಮುಂದುವರಿಯಲು ಸಾಧ್ಯವಿದೆ ಅಂತ ಪರಿಶೀಲಿಸುತ್ತೇವೆ. ಜೊತೆಗೆ ಪ್ರಕರಣದ ಸಮಗ್ರ ಮಾಹಿತಿ ತಿಳಿದುಕೊಂಡು, ಸಿಎಂ ಗಮನಕ್ಕೆ ತರಲಿದ್ದೇವೆ ಅಂತ ಹೇಳಿದ್ದಾರೆ.
-masthmagaa.com
Contact Us for Advertisement