masthmagaa.com:
ಭಾರತ-ಚೀನಾ ಗಡಿ ಸಂಘರ್ಷದ ವಿಚಾರವಾಗಿ ಮತ್ತೊಮ್ಮೆ ಚೀನಾ ಉಲ್ಟಾ ಹೊಡೆದಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಚೀನಾ ವಿದೇಶಾಂಗ ಇಲಾಖೆ ವಕ್ತಾರ ವಾಂಗ್ ವೆನ್ಬಿನ್, ಭಾರತ ತನ್ನ ತಪ್ಪನ್ನು ತಿದ್ದಿಕೊಂಡು, ಸೈನಿಕರನ್ನು ವಾಪಸ್ ಕರೆಸಿಕೊಳ್ಳಬೇಕು. ಎರಡು ದೇಶಗಳ ನಡುವಿನ ಈ ಸಂಘರ್ಷಕ್ಕೆ ಭಾರತವೇ ಹೊಣೆ ಅಂತ ಹೇಳಿದ್ದಾರೆ. ಜೊತೆಗೆ ಗಡಿಯಲ್ಲಿ ನಡೆದ ಸಂಘರ್ಷಕ್ಕೆ ಚೀನಾ ಕಾರಣವಲ್ಲ. ಭಾರತವೇ ಮೊದಲು ದ್ವಿಪಕ್ಷೀಯ ಒಪ್ಪಂದವನ್ನು ಮುರಿದಿದೆ. ನಮ್ಮನ್ನು ಪ್ರಚೋದಿಸಲು ವಾಸ್ತವಿಕ ನಿಯಂತ್ರಣ ರೇಖೆಯನ್ನು ದಾಟಿ ಮುಂದೆ ಬಂದಿದೆ. ಈ ಮೂಲಕ ಭಾರತ ಗಡಿಯಲ್ಲಿನ ಯಥಾಸ್ಥಿತಿಯನ್ನು ಭಾರತ ಬದಲಾಯಿಸಿದೆ. ಅಲ್ಲದೆ ಗಡಿಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿ, ಪ್ರಚೋದಿಸಲು ಯತ್ನಿಸಿದೆ ಅಂತ ಹೇಳಿದ್ದಾರೆ.
-masthmagaa.com
Contact Us for Advertisement