masthmagaa.com:
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ಚಿತ್ರದುರ್ಗದ ಗ್ರಾಮ ಒಂದರ ಜನರು ವಿದ್ಯುತ್ ಬಿಲ್ ಕಟ್ಟಲು ನಿರಾಕರಿಸಿದ್ದಾರೆ. ಅಲ್ಲಿನ ಜಾಲಿಕಟ್ಟಿಯಲ್ಲಿ ವಿದ್ಯುತ್ ಬಿಲ್ ಪಾವತಿಸಲು ಜನ ನಿರಾಕರಿಸಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ, ನಾವು ಬಿಲ್ ಕಟ್ಟಲ್ಲ ಅಂತ ಬೆಸ್ಕಾಂ ಸಿಬ್ಬಂದಿಗೆ ಗ್ರಾಮಸ್ಥರು ಅವಾಜ್ ಹಾಕಿದ್ದಾರೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಂದ್ಹಾಗೆ ಈ ಬಾರಿ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲೇಬೇಕೆಂತ ಕಾಂಗ್ರೆಸ್ ಹಲವು ಗ್ಯಾರಂಟಿಗಳು ಘೋಷಿಸಿದೆ. ಅದರಲ್ಲಿ ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್ ಪೂರೈಕೆಯೂ ಒಂದಾಗಿದೆ. ಅಲ್ದೇ ಜೂನ್ 1ರಿಂದ ಯಾರೂ ವಿದ್ಯುತ್ ಬಿಲ್ ಕಟ್ಟಬೇಡಿ ಅಂತ ಸ್ವತಃ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಘಂಟಾಘೋಷವಾಗಿ ಹೇಳಿದ್ದರು.
-masthmagaa.com
Contact Us for Advertisement