masthmagaa.com:
ಜೆಡಿಎಸ್ನಿಂದ ಉಚ್ಚಾಟನೆಗೊಂಡಿದ್ದ ರಾಜ್ಯಾಧ್ಯಕ್ಷ ಕೂಡ ಆಗಿದ್ದ ಸಿಎಂ ಇಬ್ರಾಹಿಂ ಇದೀಗ JDS ಪಕ್ಷದ ನೂತನ ರಾಷ್ಟ್ರೀಯರನ್ನ ನೇಮಿಸೋ ಮೂಲಕ ದಳಪತಿಗಳಿಗೆ ಸೆಡ್ಡು ಹೊಡೆದಿದ್ದಾರೆ. ಬೆಂಗಳೂರಿನ ಕೆ.ಜಿ.ಹಳ್ಳಿಯ ಖಾಸಗಿ ಹೋಟೆಲ್ನಲ್ಲಿ ಸಿ.ಎಂ.ಇಬ್ರಾಹಿಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಿ.ಕೆ ನಾಣು ಅವರನ್ನ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಅಂತ ಸಿ.ಎಂ ಇಬ್ರಾಹಿಂ ತಿಳಿಸಿದ್ದಾರೆ. ಅಂದ್ಹಾಗೆ ಈ ಹಿಂದೆ ಸಿ.ಕೆ ನಾಣು ಅವ್ರು ಜೆಡಿಎಸ್ನ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ರು, ಅಲ್ಲದೇ ಪಕ್ಷದಿಂದ ಉಚ್ಚಾಟಿಸಲ್ಪಟ್ಟಿದ್ರು. ಇನ್ನು ಇದೇ ವೇಳೆ ನಮ್ಮ ಬಳಿ 5 ಮಂದಿ ಶಾಸಕರಿದ್ದಾರೆ, ಹೊಸ ಅಧ್ಯಕ್ಷರ ನೇಮಕ ನನ್ನ ನಿರ್ಣಯ ಅಲ್ಲ, ರಾಷ್ಟ್ರೀಯ ಕೌನ್ಸಿಲ್ ನಿರ್ಣಯವಾಗಿದೆ. ಮುಂಬರುವ ದಿನಗಳಲ್ಲಿ ನಿತೀಶ್ ಕುಮಾರ್, ಲಾಲು ಪ್ರಸಾದ್ ಭೇಟಿಗೆ ಹೋಗುತ್ತಿದ್ದೇವೆ ಅಂತ ಸಿಎಂ ಇಬ್ರಾಹಿಂ ಹೇಳಿದ್ದಾರೆ.
-masthmagaa.com
Contact Us for Advertisement