ದಳಪತಿಗಳಿಗೆ ಸೆಡ್ಡು ಹೊಡೆದ ಸಿಎಂ ಇಬ್ರಾಹಿಂ: ಇಬ್ಭಾಗವಾಗುತ್ತಾ ಜೆಡಿಎಸ್?

masthmagaa.com:

ಜೆಡಿಎಸ್‌ನಿಂದ ಉಚ್ಚಾಟನೆಗೊಂಡಿದ್ದ ರಾಜ್ಯಾಧ್ಯಕ್ಷ ಕೂಡ ಆಗಿದ್ದ ಸಿಎಂ ಇಬ್ರಾಹಿಂ ಇದೀಗ JDS ಪಕ್ಷದ ನೂತನ ರಾಷ್ಟ್ರೀಯರನ್ನ ನೇಮಿಸೋ ಮೂಲಕ ದಳಪತಿಗಳಿಗೆ ಸೆಡ್ಡು ಹೊಡೆದಿದ್ದಾರೆ. ಬೆಂಗಳೂರಿನ ಕೆ.ಜಿ.ಹಳ್ಳಿಯ ಖಾಸಗಿ ಹೋಟೆಲ್​ನಲ್ಲಿ ಸಿ.ಎಂ.ಇಬ್ರಾಹಿಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಿ.ಕೆ ನಾಣು ಅವರನ್ನ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಅಂತ ಸಿ.ಎಂ ಇಬ್ರಾಹಿಂ ತಿಳಿಸಿದ್ದಾರೆ. ಅಂದ್ಹಾಗೆ ಈ ಹಿಂದೆ ಸಿ.ಕೆ ನಾಣು ಅವ್ರು ಜೆಡಿಎಸ್‌ನ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ರು, ಅಲ್ಲದೇ ಪಕ್ಷದಿಂದ ಉಚ್ಚಾಟಿಸಲ್ಪಟ್ಟಿದ್ರು. ಇನ್ನು ಇದೇ ವೇಳೆ ನಮ್ಮ ಬಳಿ 5 ಮಂದಿ ಶಾಸಕರಿದ್ದಾರೆ, ಹೊಸ ಅಧ್ಯಕ್ಷರ ನೇಮಕ ನನ್ನ ನಿರ್ಣಯ ಅಲ್ಲ, ರಾಷ್ಟ್ರೀಯ ಕೌನ್ಸಿಲ್ ನಿರ್ಣಯವಾಗಿದೆ. ಮುಂಬರುವ ದಿನಗಳಲ್ಲಿ ನಿತೀಶ್ ಕುಮಾರ್, ಲಾಲು ಪ್ರಸಾದ್​ ಭೇಟಿಗೆ ಹೋಗುತ್ತಿದ್ದೇವೆ ಅಂತ ಸಿಎಂ ಇಬ್ರಾಹಿಂ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply