masthmagaa.com:
ಕರ್ನಾಟಕದಲ್ಲಿ ಮಳೆ ಆರ್ಭಟ ಕಮ್ಮಿಯಾದ್ರೂ ಉತ್ತರ ಭಾರತದ ಹಲವೆಡೆ ಧಾರಾಕಾರವಾಗಿ ಸುರೀತಿರೋ ಮಳೆ ಭಾರಿ ಅವಾಂತರಗಳನ್ನ ಸೃಷ್ಟಿಸಿದೆ. ಜಮ್ಮು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಮೇಘಸ್ಫೋಟ ಉಂಟಾಗಿ ಕನಿಷ್ಠ 7 ಮಂದಿ ಮೃತಪಟ್ಟಿದ್ದಾರೆ. ಅವಶೇಷಗಳ ಅಡಿ ಸಿಲುಕಿದ್ದ 17 ಜನರನ್ನ ರಕ್ಷಿಸಲಾಗಿದೆ. 30ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದಾರೆ. 8 ಮನೆಗಳಿಗೆ ಹಾನಿಯಾಗಿದೆ. ಎಸ್ಡಿಆರ್ಎಫ್ ಮತ್ತು ಭಾರತೀಯ ಸೇನೆಯ ನೆರವಿನೊಂದಿಗೆ ರಕ್ಷಣಾ ಕಾರ್ಯಾಚರಣೆ ನಡೆಸಲಾಗ್ತಿದೆ. ಹಿಂದೂಗಳ ಪವಿತ್ರ ದೇವಾಲಯವಾದ ಜಮ್ಮು ಕಾಶ್ಮೀರದ ಅಮರನಾಥ ಗುಹೆ ಬಳಿಯೂ ಮೇಘಸ್ಪೋಟ ಉಂಟಾಗಿ ದಿಢೀರ್ ಪ್ರವಾಹ ಬಂದಿದೆ. ಭಾರಿ ಮಳೆ ಹಿನ್ನಲೆ ಚಿನಾಬ್ ನದಿ ಉಕ್ಕಿ ಹರಿತೀದೆ. ಹಿಮಾಚಲ ಪ್ರದೇಶದಲ್ಲಿ ದಿಢೀರ್ ಪ್ರವಾಹ ಉಂಟಾಗಿ ಕನಿಷ್ಠ 9 ಮಂದಿ ಮೃತಪಟ್ಟಿದ್ದಾರೆ, 7 ಜನ ನಾಪತ್ತೆಯಾಗಿದ್ಧಾರೆ. 25 ವರ್ಷದ ಮಹಿಳೆ ಮತ್ತು ಆಕೆಯ ಮಗು ಕೂಡ ನದಿಯಲ್ಲಿ ಕೊಚ್ಚಿ ಹೋಗಿದ್ದಾರೆ ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರಾಖಂಡ್ನಲ್ಲಿ ಭಾರಿ ಮಳೆ ಹಿನ್ನೆಲೆ ಗಂಗಾ ನದಿ ಹರಿವಿನ ಮಟ್ಟ ಹೆಚ್ಚಾಗಿದೆ. ಹರಿಯಾಣದಲ್ಲೂ ಭಾರಿ ಮಳೆಯಾಗಿದೆ.
-masthmagaa.com
Contact Us for Advertisement