ʻಹೆಚ್​ಡಿ ದೇವೇಗೌಡರೇ ಜೆಡಿಎಸ್ ರಾಷ್ಟ್ರಾಧ್ಯಕ್ಷರಾಗಿ ಇರುವುದು ಅನುಮಾನʼ: ಸಿಎಂ ಇಬ್ರಾಹಿಂ ವಾಗ್ದಾಳಿ!

masthmagaa.com:

ಇತ್ತೀಚೆಗೆ ಜೆಡಿಎಸ್‌ ಪಕ್ಷದಿಂದ ಅಮಾನತುಗೊಂಡ ಸಿಎಂ ಇಬ್ರಾಹಿಂ ಪಕ್ಷದ ವರಿಷ್ಠರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಮಾನತುಗೊಂಡ ಬಳಿಕ ಆ ಕುರಿತು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರೋ ​​ಸಿಎಂ ಇಬ್ರಾಹಿಂ, ನಾನೀಗಲೂ ಪಕ್ಷದ ಅಧ್ಯಕ್ಷ ಅಂತ ಹೇಳಿಕೊಂಡಿದ್ದಾರೆ. ಅಲ್ದೇ, ಹೆಚ್​ಡಿ ದೇವೇಗೌಡ ಅವ್ರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಇರ್ತಾರೋ ಇಲ್ವೋ ಅನ್ನೋದೇ ಅನುಮಾನವಿದೆ ಅಂತ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವ್ರು, ನಾನು ಈಗಲೂ ಜೆಡಿಎಸ್ ರಾಜ್ಯಾಧ್ಯಕ್ಷನೇ. ದೇವೇಗೌಡರೇ ರಾಷ್ಟ್ರಾಧ್ಯಕ್ಷರಾಗಿ ಇರ್ತಾರಾ ಇಲ್ವೋ ಅಂತ ಅನುಮಾನವಿದೆ. ಆ ಬಗ್ಗೆ ರಾಷ್ಟ್ರೀಯ ಕಾರ್ಯಕಾರಣಿಯಲ್ಲಿ ನಿರ್ಧಾರ ಆಗಲಿದೆ. ರಾಷ್ಟ್ರೀಯ ಕಾರ್ಯಕಾರಣಿ ನಿರ್ಧಾರ ಕೈಗೊಂಡ್ರೆ ಏನ್‌ ಮಾಡ್ತಾರೆ? ರಾಷ್ಟ್ರೀಯ ಕಾರ್ಯಕಾರಣಿ ಸಭೆ ಮಾಡಿ ಸ್ಥಾನದಿಂದ ತೆಗೆದುಹಾಕಿದ್ರೆ ಏನ್‌ ಮಾಡ್ತೀರಿ? ಮಗನಿಗಾಗಿ ಈ ತರ ಮಾಡಿದ್ರೆ ಏನು ಮಾಡ್ತೀರಾ? ಈಗಲೂ ಮನವಿ ಮಾಡ್ತೇವೆ, ನಿರ್ಣಯವನ್ನ ವಾಪಸ್ ಪಡೆಯಿರಿ ಅಂತ ಇಬ್ರಾಹಿಂ ಅವ್ರು ದೇವೇಗೌಡರನ್ನ ಒತ್ತಾಯಿಸಿದ್ದಾರೆ. ಜೊತೆಗೆ ಕುಮಾರಸ್ವಾಮಿ ಅವರನ್ನ ರಾಜ್ಯ ಘಟಕದ ಅಧ್ಯಕ್ಷರಾಗಿ ಮಾಡಿದ್ದು ಮೊದಲ ತಪ್ಪು. ಅಮಾನತು ಮಾಡಲು ನನಗೆ ನೋಟಿಸ್ ಕೊಟ್ಟಿದ್ರಾ ಅಂತ ಪ್ರಶ್ನಿಸಿದ ಅವ್ರು, ಈ ಕುರಿತು ಕಾನೂನು ಹೋರಾಟ ಮಾಡೋದಾಗಿ ಹೇಳಿಕೊಂಡಿದ್ದಾರೆ. ಎಲ್ಲೋ ರೆಸಾರ್ಟ್​​ನಲ್ಲಿ ಕೂತು 8ರಿಂದ 10 ಜನ ಸಭೆ ಮಾಡುವುದಲ್ಲ. ನ್ಯಾಷನಲ್ ಕೌನ್ಸಿಲ್ ಮೆಂಬರ್​​ನಲ್ಲಿ 26 ಜನ ಇವ್ರ ಮನೆಯವ್ರೇ ಇದ್ದಾರೆ ಅಂತ ದೇವೇಗೌಡರು ಹಾಗೂ ಕುಮಾರಸ್ವಾಮಿ ವಿರುದ್ಧ ಇಬ್ರಾಹಿಂ ಕಿಡಿ ಕಾರಿದ್ದಾರೆ. ಅಂದ್ಹಾಗೆ ಪಕ್ಷ ವಿರೋಧಿ ಹೇಳಿಕೆಗಳನ್ನ ನೀಡಿ ಮತ್ತು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರೋ ಆರೋಪದ ಮೇಲೆ ಸಿಎಂ ಇಬ್ರಾಹಿಂ ಅವ್ರನ್ನ ಶುಕ್ರವಾರದಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್​​ಡಿ ದೇವೇಗೌಡ ಅಮಾನತುಗೊಳಿಸಿದ್ರು.

-masthmagaa.com

Contact Us for Advertisement

Leave a Reply