ಬೆಳಗಾವಿಗೂ ವಂದೇ ಭಾರತ್‌ ವಿಸ್ತರಿಸಿ ಎಂದು ಕೇಂದ್ರಕ್ಕೆ ಮನವಿ ಮಾಡಿದ ಸಿಎಂ ಸಿದ್ದರಾಮಯ್ಯ!

masthmagaa.com:

ಪ್ರತಿದಿನ ಬೆಂಗಳೂರು-ಧಾರವಾಡ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಬೆಳಗಾವಿವರೆಗೆ ವಿಸ್ತರಿಸಬೇಕು ಅಂತ ಸಿಎಂ ಸಿದ್ದರಾಮಯ್ಯನವರು ಕೇಂದ್ರಕ್ಕೆ ಮನವಿ ಮಾಡಿದ್ದಾರೆ. ಈ ಕುರಿತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವ್ರಿಗೆ ಪತ್ರ ಬರೆದಿದ್ದು, ಈ ವಂದೇ ಭಾರತ್‌ ರೈಲನ್ನ ಬೆಳಗಾವಿವರೆಗೆ ವಿಸ್ತರಿಸಬೇಕು. ಇದ್ರಿಂದ ಬೆಳಗಾವಿ, ಗೋವಾ ಹಾಗೂ ಮಹಾರಾಷ್ಟ್ರಕ್ಕೆ ಹೋಗುವ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಪ್ರವಾಸೋದ್ಯಮ ಕೂಡ ಅಭವೃದ್ಧಿಯಾಗುತ್ತೆ ಅಂತ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply