ರಾಜ್ಯ ಸರ್ಕಾರದ ವಿರುದ್ಧ ಚಾರ್ಜ್‌ಶೀಟ್‌ ರಿಲೀಸ್‌ ಮಾಡಿದ ಬಿಜೆಪಿ! ಸಿದ್ದರಾಮಯ್ಯ ಏನಂದ್ರು?

masthmagaa.com:

ಬಿಜೆಪಿ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳ ಕಿರುಹೊತ್ತಿಗೆಯನ್ನ ಬಿಡುಗಡೆ ಮಾಡಿದೆ. ‘ಕೈಕೊಟ್ಟ ಯೋಜನೆಗಳು: ಹಳಿ ತಪ್ಪಿದ ಆಡಳಿತ’ ಅನ್ನೊ ಟೈಟಲ್‌ನಲ್ಲಿ ಚಾರ್ಜ್‌ಶೀಟ್‌ ರೀತಿಯ ಕಿರುಹೊತ್ತಿಗೆಯನ್ನ ಬಿಡುಗಡೆ ಮಾಡಿದೆ. ಸರ್ಕಾರಿ ನೌಕರರ ವರ್ಗಾವಣೆ ದಂಧೆ, ಆಡಳಿತದಲ್ಲಿನ ಭ್ರಷ್ಟಾಚಾರ, ಗುತ್ತಿಗೆದಾರರ ಬಿಲ್‌ ಬಾಕಿ, ರೈತ ಸಮ್ಮಾನ್‌ ಸೇರಿದಂತೆ ಹಿಂದಿನ ಬಿಜೆಪಿ ಸರ್ಕಾರದ ವಿವಿಧ ಯೋಜನೆಗಳಿಗೆ ಕತ್ತರಿ ಪ್ರಯೋಗ, ರೈತರ ಆತ್ಮಹತ್ಯೆ, ಗ್ಯಾರಂಟಿ ಯೋಜನೆಗಳಿಗೆ ಷರತ್ತು ವಿಧಿಸಿದ್ದು, ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು, ಅನುದಾನ ಬಿಡುಗಡೆ ವಿಳಂಬ, ಲೋಡ್‌ ಶೆಡ್ಡಿಂಗ್‌, ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿ/ಎಸ್‌ಟಿ ಹಣ ಬಳಕೆ ಮತ್ತಿತರ ಅಂಶಗಳ ಬಗ್ಗೆ ಪ್ರಕಟಗೊಂಡಿರುವ ವರದಿಗಳನ್ನು ಸರ್ಕಾರದ ವೈಫಲ್ಯಗಳು ಅಂತ ಉಲ್ಲೇಖಿಸಿ ಕಿರುಹೊತ್ತಿಗೆಯಲ್ಲಿ ಪ್ರಸ್ತಾಪಿಸಲಾಗಿದೆ.

-masthmagaa.com

Contact Us for Advertisement

Leave a Reply