ಬೆಂಗಳೂರು ಸೀಲ್​​ಡೌನ್​ ಬಗ್ಗೆ ಇಂದು, ನಾಳೆ ನಿರ್ಧಾರ: ಸಿಎಂ ಯಡಿಯೂರಪ್ಪ

masthmagaa.com:

ಬೆಂಗಳೂರಿನಲ್ಲಿ ಕೊರೋನಾ ಹಾವಳಿ ಹೆಚ್ಚಾಗ್ತಿರುವ ಹಿನ್ನೆಲೆ ಸಚಿವರು, ಶಾಸಕರು ಮತ್ತು ಅಧಿಕಾರಿಗಳ ಜೊತೆ ಇಂದು ಮತ್ತು ನಾಳೆ ಸಭೆ ನಡೆಸಿ ಸೀಲ್​​ಡೌನ್ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ ಅಂತ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರು ಸೀಲ್​ಡೌನ್ ಆಗಬಾರದು ಅಂದ್ರೆ ಜನ ಸಹಕರಿಸಬೇಕು. ಸಾಮಾಜಿಕ ಅಂತರ ಕಾಪಾಡಬೇಕು ಅಂತಾನೂ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಕೊರೋನಾ ನಿಯಂತ್ರಣಕ್ಕೆ ತರುವ ಸಂಬಂಧ ಇಂದು ಮಧ್ಯಾಹ್ನ 1 ಗಂಟೆಗೆ ಎಲ್ಲಾ ಸಚಿವರ ಜೊತೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಲಿದೆ. ನಾಳೆ ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಎಲ್ಲಾ ಶಾಸಕರು ಮತ್ತು ಅಧಿಕಾರಿಗಳ ಜೊತೆ ಸಿಎಂ ಯಡಿಯೂರಪ್ಪ ಸಭೆ ನಡೆಸಲಿದ್ದಾರೆ.

ಕೊರೋನಾ ನಿಯಂತ್ರಿಸುವಲ್ಲಿ ಬೆಂಗಳೂರು ನಗರ ಇಡೀ ದೇಶಕ್ಕೆ ಮಾದರಿಯಾಗಿದೆ. ಇದನ್ನ ಹೀಗೇ ಮುಂದುವರಿಸಿಕೊಂಡು ಹೋಗಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಸಿಎಂ ಬಿಎಸ್​ವೈ ಹೇಳಿದ್ದಾರೆ.

masthmagaa.com

Contact Us for Advertisement

Leave a Reply