masthmagaa.com:
ಬೆಂಗಳೂರು: ಕೊರೋನಾ ಸೋಂಕು ಹರಡುವ ಭೀತಿ ಹೆಚ್ಚಾಗಿರುವುದರಿಂದ ಕರ್ನಾಟಕ-ಕೇರಳ ಗಡಿ ಬಂದ್ ಸಡಿಲಗೊಳಿಸಲು ಸಾಧ್ಯವೇ ಇಲ್ಲ ಅಂತ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಗಡಿ ತೆರವು ಸಂಬಂಧ ಮಾಜಿ ಪ್ರಧಾನಿ ದೇವೇಗೌಡ್ರು ಸಿಎಂ ಬಿಎಸ್ವೈಗೆ ಪತ್ರ ಬರೆದಿದ್ದರು. ಈ ಪತ್ರಕ್ಕೆ ಪ್ರತಿಕ್ರಿಯಿಸಿದ ಅವರು ರಾಜ್ಯದ ಪ್ರತಿಯೊಬ್ಬರ ಪ್ರಾಣ ರಕ್ಷಣೆ ನನ್ನ ಸರ್ಕಾರದ ಹೊಣೆ ಎಂದಿದ್ದಾರೆ.
ಗಡಿ ಬಂದ್ ಮಾಡುವ ನಿರ್ಧಾರವನ್ನ ಏಕಾಏಕಿ ತೆಗೆದುಕೊಂಡಿಲ್ಲ. ಗಡಿ ಭಾಗದ ಜನರ ಆರೋಗ್ಯ ಸಮಸ್ಯೆಯನ್ನ ಗಂಭೀರವಾಗಿ ಅಧ್ಯಯನ ಮಾಡಿ, ಸಂಬಂಧಿಸಿದ ಪೂರಕ ದಾಖಲೆಗಳ ಆಧಾರದ ಮೇಲೆ ಗಡಿಯನ್ನು ಮುಚ್ಚಲಾಗಿದೆ. ಗಡಿಯನ್ನ ಓಪನ್ ಮಾಡಿದ್ರೆ ರಾಜ್ಯದ ಸಾವಿರಾರು ಜನರ ಆರೋಗ್ಯಕ್ಕೆ ಧಕ್ಕೆಯಾಗುವ ಸಾಧ್ಯತೆಯಿದೆ ಅಂತ ಹೇಳಿದ್ದಾರೆ.
-masthmagaa.com
Contact Us for Advertisement