ಆಸ್ಪತ್ರೆಯಿಂದಲೇ ಸಿಎಂ ಯಡಿಯೂರಪ್ಪ ವಿಡಿಯೋ ಸಂದೇಶ.. ಏನ್ ಹೇಳಿದ್ರು ಗೊತ್ತಾ..?

masthmagaa.com:

ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿರುವ ಸಿಎಂ ಬಿ.ಎಸ್. ಯಡಿಯೂರಪ್ಪ ಅಲ್ಲಿಂದಲೇ ರಾಜ್ಯದ ಜನರಿಗೆ ಸಂದೇಶವೊಂದನ್ನು ರವಾನಿಸಿದ್ದಾರೆ. ‘ಭಾನುವಾರ ರಾತ್ರಿ 8.30ರಿಂದ 9 ಗಂಟೆ ಸುಮಾರಿಗೆ ನನಗೆ ಕೊರೋನಾ ಸೋಂಕು ತಗುಲಿರೋದು ದೃಢಪಟ್ಟಿತ್ತು. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ನನಗೆ ಯಾವುದೇ ತೊಂದರೆ ಇಲ್ಲ, ಆದಷ್ಟು ಬೇಗ ಗುಣಮುಖರಾಗಿ ಹೋಗುತ್ತೀರ ಅಂತ ವೈದ್ಯರು ಹೇಳಿದ್ದಾರೆ. ಈಗಾಗಲೇ ಎಲ್ಲಾ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಯಾರೂ ಆತಂಕಪಡುವ ಅಗತ್ಯವಿಲ್ಲ. ದಯವಿಟ್ಟು ದೈಹಿಕ ಅಂತರ ಕಾಪಾಡಿ, ಮಾಸ್ಕ್ ಧರಿಸಿ. ಕೊರೋನಾಗೆ ಸಂಬಂಧಿಸಿದಂತೆ ಎಚ್ಚರದಿಂದ ಇರಿ ಅಂತ ರಾಜ್ಯದ 6.5 ಕೋಟಿ ಜನರಲ್ಲಿ ಮನವಿ ಮಾಡಿಕೊಳ್ಳುತ್ತೇನೆ’ ಎಂದಿದ್ದಾರೆ.

ಜೊತೆಗೆ ನಾನು ಆದಷ್ಟು ಬೇಗ ಗುಣಮುಖರಾಗಿ ಬರುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಮಾಜಿ ಸಿಎಂ ಸಿದ್ದರಾಮಯ್ಯ, ವಿವಿಧ ಮಠಗಳ ಮಠಾಧೀಶರು ಹಾರೈಸಿದ್ದಾರೆ ಅಂತಾನೂ ಹೇಳಿದ್ರು. ವಿಡಿಯೋದಲ್ಲಿ ಮಾತನಾಡುವಾಗ ಸಿಎಂ ಯಡಿಯೂರಪ್ಪ ಆರಾಮಾಗಿದ್ದಿದ್ದು ಕಂಡು ಬಂತು. ಬಿಎಸ್​ವೈಗೆ ಕೊರೋನಾ ದೃಢಪಟ್ಟ ಹಿನ್ನೆಲೆ ಅವರನ್ನು ಬೆಂಗಳೂರಿನ ಓಲ್ಡ್​ ಏರ್‌ಪೋರ್ಟ್‌ ರಸ್ತೆಯ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

-masthmagaa.com

Contact Us for Advertisement

Leave a Reply