masthmagaa.com:
ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಸೆಪ್ಟೆಂಬರ್ 6ರಿಂದ 10ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಅಂತ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಇಂದಿನಿಂದ 5 ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಒಳನಾಡು ಭಾಗದಲ್ಲೂ ಸೆಪ್ಟೆಂಬರ್ 6ರಿಂದ 10ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಚಾಮರಾಜನಗರ, ಮೈಸೂರು, ತುಮಕೂರು, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 6,7,8ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನು ಉತ್ತರ ಒಳನಾಡು ಭಾಗದಲ್ಲಿ ಸೆಪ್ಟೆಂಬರ್ 6 ಮತ್ತು 7ರಂದು ತಕ್ಕಮಟ್ಟಿಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Belgaum, Dharwad, Gadag likely to experience isolated heavy rainfall, yellow alert on 6 & 7 Sept. South interior Karnataka very likely to experience widespread rainfall during 6-10 Sept. Yellow alert on 6,7,8 Sept in Chamarajanagar, Mysuru, Tumkur, Davanagere & Chitradurga: IMD https://t.co/vkAGznfeeR
— ANI (@ANI) September 6, 2020
-masthmagaa.com
Contact Us for Advertisement