ಹುಲಿ ಉಗುರಿನ ಲಾಕೆಟ್‌: ನಟ ಜಗ್ಗೇಶ್‌ಗೂ ಕಾದಿದ್ಯಾ ಆಪತ್ತು?

masthmagaa.com:

ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಹುಲಿ ಉಗುರಿನ ಲಾಕೆಟ್‌ಗಳು ಭಾರಿ ಸದ್ಧು ಮಾಡ್ತಿವೆ. ಇದೀಗ ಇದೇ ಹುಲಿ ಉಗುರು ಲಾಕೆಟ್‌ ವಿಚಾರಕ್ಕೆ ನಟ ಜಗ್ಗೇಶ್‌ಗೂ ಸಂಕಷ್ಟ ಎದುರಾಗಿದೆ. ಬಿಜೆಪಿ ರಾಜ್ಯಸಭಾ ಸದಸ್ಯ, ನಟ ಜಗ್ಗೇಶ ಅವರು ಹುಲಿ ಉಗುರು ಲಾಕೆಟ್​​​​ ಧರಿಸಿರುವ ವಿಡಿಯೋ ವೈರಲ್​ ಆಗಿದೆ. ಈ ಸಂಬಂಧ ಜಗ್ಗೇಶ್​ ವಿರುದ್ಧ ಕಾಂಗ್ರೆಸ್​ನ ಮಾಜಿ ಎಂಎಲ್​ಸಿ ಪಿ.ಆರ್ ರಮೇಶ್, ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರಿಗೆ ದೂರು ನೀಡಿದ್ದಾರೆ. ಅಲ್ದೆ ಜಗ್ಗೇಶ್ ಅವರು ಇದು ಒರಿಜಿನಲ್​ ಅಂತ ಸ್ವತಃ ಅವರೇ ಹೇಳಿಕೊಂಡಿದ್ದಾರೆ. ಹೀಗಾಗಿ ಜಗ್ಗೇಶ್ ಪ್ರಕರಣವನ್ನು ನಾವು ಪರಿಗಣನೆಗೆ ತೆಗೆದುಕೊಳ್ಳುತ್ತೇವೆ. ಸಂತೋಷ್ ಬಳಿಕ ಬೇರೆಯವರ ವಿರುದ್ಧವೂ ಕ್ರಮಕ್ಕೆ ದೂರು ಬರುತ್ತಿದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ದೂರು ನೀಡಿದರೇ ಕ್ರಮ ಕೈಗೊಳ್ಳಲಾಗುತ್ತೆ ಅಂತ ವನ್ಯಜೀವಿ ಅರಣ್ಯಾಧಿಕಾರಿ ರವೀಂದ್ರ ಕುಮಾರ್ ಹೇಳಿದ್ದಾರೆ. ಜೊತೆಗೆ ನಟ ದರ್ಶನ್‌ ವಿರುದ್ಧವೂ ದೂರು ಬಂದಿದ್ದು, ಲಾಕೆಟ್‌ ಒರಿಜನಲ್‌ ಅಥ್ವಾ ನಕಲಿನಾ ಅನ್ನೋ ಬಗ್ಗೆ ಕನ್ಫರ್ಮ್‌ ಮಾಡಿಕೊಳ್ಳುವ ಅಗತ್ಯವಿದೆ ಅಂತ ತಿಳಿಸಿದ್ದಾರೆ. ಇತ್ತ ನಿಖಿಲ್ ಕುಮಾರಸ್ವಾಮಿ ಅವರು ಹುಲಿ ಉಗುರು ಇರುವ ಪೆಂಡೆಂಟ್ ಧರಿಸಿದ್ದರು ಎನ್ನಲಾದ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಅವರ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಆಗ್ರಹ ಕೇಳಿ ಬಂದಿತ್ತು. ಈ ವಿಚಾರಕ್ಕೆ ಸಂಬಂಧಿಸಿ ನಿಖಿಲ್ ಸ್ಪಷ್ಟನೆ ನೀಡಿದ್ದಾರೆ. ‘ಇದು ಸತ್ಯಕ್ಕೆ ದೂರವಾದುದ್ದು’ ಹಾಗೂ ಆ ಪೆಂಡೆಂಟ್‌ ನಕಲಿಯಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಬೇಕಾದ್ರೆ ಪರಿಶೀಲನೆ ನಡೆಸಬಹುದು ಅಂತ ಹೇಳಿದ್ದಾರೆ.

ಅತ್ತ ಹುಲಿ ಉಗುರಿನ ವಿಚಾರವಾಗಿ ರಿಯಾಕ್ಟ್‌ ಮಾಡಿರೋ ಅರಣ್ಯ ಸಚಿವ ಈಶ್ವರ್‌ ಖಂಡ್ರೆ, ರಾಜ್ಯದಲ್ಲಿ ಹುಲಿ ಉಗುರಿನ ಪೆಂಡೆಂಟ್ ಸೇರಿದಂತೆ ಇತರೆ ವಸ್ತುಗಳ ಬಳಕೆ ಮಾಡ್ತಿರೋದು ಕಂಡು ಬಂದಿದೆ. ಈಗಾಗಲೇ ಕೆಲವು ಬಂಧನಗಳಾಗಿವೆ. ಈ ಎಲ್ಲ ಪ್ರಕರಣಗಳಲ್ಲಿ ನೆಲದ ಕಾನೂನು ಬಳಕೆ ಮಾಡಲಾಗುವುದು ಅಂತ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply