masthmagaa.com:
ಆಪರೇಷನ್ ಹಸ್ತದ ಬಗ್ಗೆ ಮಾತನಾಡಿರುವ ಸೋಮಶೇಖರ್, ನಾನು ಇದುವರೆಗೂ ಮಾನಸಿಕವಾಗಿ ಬಿಜೆಪಿಯಲ್ಲಿದ್ದೇನೆ. ಕಳೆದ 15 ದಿನಗಳಿಂದ ಎಲ್ಲಾ ಬೆಳವಣಿಗಳು ನಡೆಯುತ್ತಿವೆ. ಸಿಎಂ ಹಾಗೂ ಡಿಸಿಎಂ ಭೇಟಿ ವೇಳೆ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಅವರು ನನ್ನನ್ನು ಕೇಳಿಲ್ಲ. ನಾನು ಕಾಂಗ್ರೆಸ್ ಬಿಡುವಾಗ ಬಿಜೆಪಿಗೆ ಅಗತ್ಯ ಇತ್ತು. ಆದ್ರೆ ಈಗ ಕಾಂಗ್ರೆಸ್ಗೆ ಅಂತಹ ಅಗತ್ಯವಿಲ್ಲ ಅಂತ ಹೇಳಿದ್ದಾರೆ. ಅಂದ್ಹಾಗೆ ನಿನ್ನೆ ಎಸ್ .ಟಿ. ಸೋಮಶೇಖರ್ ಅವರ ಪ್ರಮುಖ ಬೆಂಬಲಿಗರು ಹಾಗೂ ನೂರಾರು ಸಂಖ್ಯೆಯ ಬಿಜೆಪಿ ಕಾರ್ಯಕರ್ತರು ಡಿಸಿಎಂ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
-masthmagaa.com
Contact Us for Advertisement