ಕಾಂಗ್ರೆಸ್‌ಗೆ ನಾನ್‌ ಬೇಕಾಗಿಲ್ಲ: ಎಸ್‌.ಟಿ ಸೋಮಶೇಖರ್

masthmagaa.com:

ಆಪರೇಷನ್​ ಹಸ್ತದ ಬಗ್ಗೆ ಮಾತನಾಡಿರುವ ಸೋಮಶೇಖರ್,​​ ನಾನು ಇದುವರೆಗೂ ಮಾನಸಿಕವಾಗಿ ಬಿಜೆಪಿಯಲ್ಲಿದ್ದೇನೆ. ಕಳೆದ 15 ದಿನಗಳಿಂದ ಎಲ್ಲಾ ಬೆಳವಣಿಗಳು ನಡೆಯುತ್ತಿವೆ. ಸಿಎಂ ಹಾಗೂ ಡಿಸಿಎಂ ಭೇಟಿ ವೇಳೆ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಅವರು ನನ್ನನ್ನು ಕೇಳಿಲ್ಲ. ನಾನು ಕಾಂಗ್ರೆಸ್ ಬಿಡುವಾಗ ಬಿಜೆಪಿಗೆ ಅಗತ್ಯ ಇತ್ತು. ಆದ್ರೆ ಈಗ ಕಾಂಗ್ರೆಸ್​ಗೆ ಅಂತಹ ಅಗತ್ಯವಿಲ್ಲ ಅಂತ ಹೇಳಿದ್ದಾರೆ. ಅಂದ್ಹಾಗೆ ನಿನ್ನೆ ಎಸ್ .ಟಿ. ಸೋಮಶೇಖರ್ ಅವರ ಪ್ರಮುಖ ಬೆಂಬಲಿಗರು ಹಾಗೂ ನೂರಾರು ಸಂಖ್ಯೆಯ ಬಿಜೆಪಿ ಕಾರ್ಯಕರ್ತರು ಡಿಸಿಎಂ ಡಿ.ಕೆ.ಶಿವಕುಮಾರ್‌ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

-masthmagaa.com

Contact Us for Advertisement

Leave a Reply