masthmagaa.com:
ಇನ್ನು ಕೆಲವೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ ಎದುರಿಸಲಿರೋ ಪುದುಚೆರಿ ಕೇಂದ್ರಾಡಳಿತ ಪ್ರದೇಶದಲ್ಲಿ ಅಧಿಕಾರದಲ್ಲಿರೋ ಕಾಂಗ್ರೆಸ್ ಸರ್ಕಾರ ಬಹುಮತ ಕಳೆದುಕೊಂಡಿದೆ. ಇವತ್ತು ಕಾಂಗ್ರೆಸ್ ಶಾಸಕ ಜಾನ್ ಕುಮಾರ್ ಅನ್ನೋರು ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಕಳೆದೊಂದು ತಿಂಗಳಲ್ಲಿ ಒಟ್ಟು ನಾಲ್ವರು ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದಂತಾಗಿದೆ. ಚುನಾವಣಾ ತಯಾರಿ ಬಗ್ಗೆ ಪರಿಶೀಲಿಸಲು ರಾಹುಲ್ ಗಾಂಧಿ ನಾಳೆ ಪುದುಚೆರಿಗೆ ಬರ್ತಿರುವಾಗಲೇ ಈ ಬೆಳವಣಿಗೆ ನಡೆದಿದೆ. 30 ಸದಸ್ಯ ಬಲದ ಪುದುಚೆರಿ ವಿಧಾನಸಭೆಯಲ್ಲಿ ಕಾಂಗ್ರೆಸ್ 15 ಶಾಸಕರನ್ನ ಹೊಂದಿತ್ತು. ಜೊತೆಗೆ ಡಿಎಂಕೆಯ ಇಬ್ಬರು ವಿ. ನಾರಾಯಣಸ್ವಾಮಿ ಸರ್ಕಾರಕ್ಕೆ ಬೆಂಬಲ ನೀಡಿದ್ದರು. ಇದರೊಂದಿಗೆ ಮ್ಯಾಜಿಕ್ ನಂಬರ್ 16 ದಾಟಿತ್ತು. ಆದ್ರೀಗ ನಾಲ್ವರು ಶಾಸಕರ ರಾಜೀನಾಮೆಯೊಂದಿಗೆ ಕಾಂಗ್ರೆಸ್ ಬಲ 11ಕ್ಕೆ ಕುಸಿದಿದೆ. ಈ ಮೂಲಕ ನಾರಾಯಣಸ್ವಾಮಿ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ. ಚುನಾವಣೆ ಸಂದರ್ಭದಲ್ಲೇ ಈ ಬೆಳವಣಿಗೆ ನಡೆದಿರೋದು ಕಾಂಗ್ರೆಸ್ಗೆ ಹಿನ್ನಡೆ ಮತ್ತು ಮುಜುಗರ ಉಂಟು ಮಾಡಿದೆ.
-masthmagaa.com
Contact Us for Advertisement