masthmagaa.com:

ಇನ್ನು ಕೆಲವೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ ಎದುರಿಸಲಿರೋ ಪುದುಚೆರಿ ಕೇಂದ್ರಾಡಳಿತ ಪ್ರದೇಶದಲ್ಲಿ ಅಧಿಕಾರದಲ್ಲಿರೋ ಕಾಂಗ್ರೆಸ್ ಸರ್ಕಾರ ಬಹುಮತ ಕಳೆದುಕೊಂಡಿದೆ. ಇವತ್ತು ಕಾಂಗ್ರೆಸ್ ಶಾಸಕ ಜಾನ್ ಕುಮಾರ್ ಅನ್ನೋರು ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಕಳೆದೊಂದು ತಿಂಗಳಲ್ಲಿ ಒಟ್ಟು ನಾಲ್ವರು ಕಾಂಗ್ರೆಸ್​ ಶಾಸಕರು ರಾಜೀನಾಮೆ ನೀಡಿದಂತಾಗಿದೆ. ಚುನಾವಣಾ ತಯಾರಿ ಬಗ್ಗೆ ಪರಿಶೀಲಿಸಲು ರಾಹುಲ್ ಗಾಂಧಿ ನಾಳೆ ಪುದುಚೆರಿಗೆ ಬರ್ತಿರುವಾಗಲೇ ಈ ಬೆಳವಣಿಗೆ ನಡೆದಿದೆ. 30 ಸದಸ್ಯ ಬಲದ ಪುದುಚೆರಿ ವಿಧಾನಸಭೆಯಲ್ಲಿ ಕಾಂಗ್ರೆಸ್ 15 ಶಾಸಕರನ್ನ ಹೊಂದಿತ್ತು. ಜೊತೆಗೆ ಡಿಎಂಕೆಯ ಇಬ್ಬರು ವಿ. ನಾರಾಯಣಸ್ವಾಮಿ ಸರ್ಕಾರಕ್ಕೆ ಬೆಂಬಲ ನೀಡಿದ್ದರು. ಇದರೊಂದಿಗೆ ಮ್ಯಾಜಿಕ್ ನಂಬರ್ 16 ದಾಟಿತ್ತು​. ಆದ್ರೀಗ ನಾಲ್ವರು ಶಾಸಕರ ರಾಜೀನಾಮೆಯೊಂದಿಗೆ ಕಾಂಗ್ರೆಸ್​ ಬಲ 11ಕ್ಕೆ ಕುಸಿದಿದೆ. ಈ ಮೂಲಕ ನಾರಾಯಣಸ್ವಾಮಿ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ. ಚುನಾವಣೆ ಸಂದರ್ಭದಲ್ಲೇ ಈ ಬೆಳವಣಿಗೆ ನಡೆದಿರೋದು ಕಾಂಗ್ರೆಸ್​​ಗೆ ಹಿನ್ನಡೆ ಮತ್ತು ಮುಜುಗರ ಉಂಟು ಮಾಡಿದೆ.

-masthmagaa.com

Contact Us for Advertisement

Leave a Reply