masthmagaa.com:
ವಿಧಾನಸಭಾ ಚುನಾವಣೆಗೆ ಕೇವಲ 5 ದಿನಗಳು ಬಾಕಿಯಿದ್ದು, ಆರೋಪ-ಪ್ರತ್ಯಾರೋಪಗಳು ಜೋರಾಗಿವೆ. AICC ವಕ್ತಾರ ಪವನ್ ಖೇರಾ, ಇಂದು ಕೆಪಿಸಿಸಿ ಕಚೇರಿಯಲ್ಲಿ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ಕುರಿತು ರೇಟ್ ಕಾರ್ಡ್ ರಿಲೀಸ್ ಮಾಡಿದ್ದಾರೆ. ಈ ವೇಳೆ ಮಾತಾಡಿದ ಖೇರಾ, ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ರಾಜ್ಯದ ಜನರಿಗೆ ಗೊತ್ತಿದೆ. ರಾಜ್ಯದಲ್ಲಿ 40% ಅಲ್ಲ 50% ಕಮಿಷನ್ ನಡೆಯುತ್ತಿದೆ. ರಾಜ್ಯದ ಮುಖ್ಯಮಂತ್ರಿ ಹುದ್ದೆಗೆ 2,500 ಕೋಟಿ ಕಮಿಷನ್, ಮಂತ್ರಿ ಹುದ್ದೆಗೆ 500 ಕೋಟಿ, ವರ್ಗಾವಣೆಗೆ 5 ರಿಂದ 15 ಕೋಟಿ, ಇಂಜಿನಿಯರ್ ಹುದ್ದೆಗೆ 1 ರಿಂದ 5 ಕೋಟಿ ನೀಡಬೇಕು ಅಂತ ಬಿಜೆಪಿ ವಿರುದ್ದ ಹರಿಹಾಯ್ದಿದ್ದಾರೆ.
-masthmagaa.com
Contact Us for Advertisement