masthmagaa.com:
2023ರ ರಾಜ್ಯ ವಿಧಾನಸಭಾ ಚುನಾವಣೆಗೆ ಸಿದ್ದವಾಗ್ತಿರೊ ಕಾಂಗ್ರೆಸ್ ನಿನ್ನೆ ದಿಲ್ಲಿಯಲ್ಲಿ ಸಭೆ ನಡೆಸಿದೆ. AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಎಲ್ಲ ಪ್ರಮುಖ ನಾಯಕರು ಪಾಲ್ಗೊಂಡಿದ್ರು. ಈ ವೇಳೆ ಡಿಕೆಶಿ ಹಾಗೂ ಸಿದ್ದುರ ಪ್ರತ್ಯೇಕ ಚುನಾವಣಾ ಯಾತ್ರೆಗೆ ಖರ್ಗೆ ಬ್ರೇಕ್ ಹಾಕಿದ್ದಾರೆ. ಇಬ್ಬರೂ ಸೇರಿ ಜಂಟಿಯಾಗಿ ಯಾತ್ರೆ ಮಾಡುವಂತೆ ಸೂಚಿಸಿದ್ದಾರೆ. ರಾಜ್ಯದ ಎಲ್ಲಾ ಪ್ರಮುಖ ನಾಯಕರೂ ಯಾತ್ರೆಯಲ್ಲಿರಬೇಕು. ಯಾತ್ರೆಯಲ್ಲಿ ಯಾವುದೇ ಕಾರಣಕ್ಕೂ ಗುಂಪುಗಾರಿಕೆ ಹಾಗೂ ಬಣ ರಾಜಕೀಯದಂತಹ ಚಟುವಟಿಕೆಗಳಿಗೆ ಆಸ್ಪದ ನೀಡಬಾರದು ಅಂತ ಹೇಳಿದ್ದಾರೆ ಎನ್ನಲಾಗಿದೆ.
-masthmagaa.com
Contact Us for Advertisement