masthmagaa.com:

ಡಿ.ಜೆ. ಹಳ್ಳಿ-ಕೆ.ಜಿ. ಹಳ್ಳಿ ಗಲಭೆ ಮತ್ತು ಕಾಂಗ್ರೆಸ್​ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಬಿಬಿಎಂಪಿ ಮಾಜಿ ಮೇಯರ್ ಮತ್ತು ಕಾಂಗ್ರೆಸ್​ನ ಸಂಪತ್ ರಾಜ್​ಗೆ ಮತ್ತೆ 5 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ. ಸುಮಾರು ಒಂದು ತಿಂಗಳಿನಿಂದ ನಾಪತ್ತೆಯಾಗಿದ್ದ ಸಂಪತ್ ರಾಜ್​ನನ್ನು ನವೆಂಬರ್ 17ರಂದು ಸಿಸಿಬಿ ಪೋಲೀಸರು ಬಂಧಿಸಿದ್ದರು. ಬಳಿಕ ಅವರನ್ನ ಸಿಸಿಬಿ ಕಸ್ಟಡಿಗೆ ಪಡೆದುಕೊಂಡಿತ್ತು. ಇವತ್ತು ಸಿಸಿಬಿ ಕಸ್ಟಡಿ ಮುಕ್ತಾಯವಾದ ಹಿನ್ನೆಲೆ ಅವರನ್ನ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಯ್ತು. ಈ ವೇಳೆ ನವೆಂಬರ್ 24ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ. ಅಲ್ಲಿವರೆಗೆ ಸಂಪತ್​ ರಾಜ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರಲಿದ್ದಾರೆ. ಜೈಲಿನಲ್ಲೇ ಸಿಸಿಬಿ ಪೊಲೀಸರು ಅವರ ವಿಚಾರಣೆ ನಡೆಸಲಿದ್ದಾರೆ.

-masthmagaa.com

Contact Us for Advertisement

Leave a Reply