masthmagaa.com:
ಡಿ.ಜೆ. ಹಳ್ಳಿ-ಕೆ.ಜಿ. ಹಳ್ಳಿ ಗಲಭೆ ಮತ್ತು ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಬಿಬಿಎಂಪಿ ಮಾಜಿ ಮೇಯರ್ ಮತ್ತು ಕಾಂಗ್ರೆಸ್ನ ಸಂಪತ್ ರಾಜ್ಗೆ ಮತ್ತೆ 5 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ. ಸುಮಾರು ಒಂದು ತಿಂಗಳಿನಿಂದ ನಾಪತ್ತೆಯಾಗಿದ್ದ ಸಂಪತ್ ರಾಜ್ನನ್ನು ನವೆಂಬರ್ 17ರಂದು ಸಿಸಿಬಿ ಪೋಲೀಸರು ಬಂಧಿಸಿದ್ದರು. ಬಳಿಕ ಅವರನ್ನ ಸಿಸಿಬಿ ಕಸ್ಟಡಿಗೆ ಪಡೆದುಕೊಂಡಿತ್ತು. ಇವತ್ತು ಸಿಸಿಬಿ ಕಸ್ಟಡಿ ಮುಕ್ತಾಯವಾದ ಹಿನ್ನೆಲೆ ಅವರನ್ನ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಯ್ತು. ಈ ವೇಳೆ ನವೆಂಬರ್ 24ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ. ಅಲ್ಲಿವರೆಗೆ ಸಂಪತ್ ರಾಜ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರಲಿದ್ದಾರೆ. ಜೈಲಿನಲ್ಲೇ ಸಿಸಿಬಿ ಪೊಲೀಸರು ಅವರ ವಿಚಾರಣೆ ನಡೆಸಲಿದ್ದಾರೆ.
-masthmagaa.com
Contact Us for Advertisement