ವರುಣಾ ಹಾಗೂ ಬಾದಾಮಿಯಲ್ಲಿ ಸಿದ್ದು ಸ್ಪರ್ಧೆ! ಸಿಎಂ ಆಸೆಯೂ ಬಹಿರಂಗ!

masthmagaa.com:

ಮುಂದಿನ ವಿಧಾನಸಭಾ ಚುನಾವಣೆಗೆ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕು ಅನ್ನೋ ಗೊಂದಲದಲ್ಲಿರೋ ಮಾಜಿ ಸಿಎಂ ಸಿದ್ದರಾಮಯ್ಯ ವರುಣಾದಿಂದಲೇ ಸ್ಪರ್ಧಿಸುವ ಆಸೆಯನ್ನ ವ್ಯಕ್ತಪಡಿಸಿದ್ದಾರೆ. ಅಲ್ದೇ ವರುಣಾ ಜೊತೆ ಮತ್ತೊಂದು ಕ್ಷೇತ್ರದಲ್ಲಿ ಸ್ಪರ್ಧಿಸುವ ಬಗ್ಗೆಯೂ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಮಾತಾಡಿದ ಸಿದ್ದರಾಮಯ್ಯ, ವರುಣಾ ಜೊತೆಗೆ ಮತ್ತೊಂದು ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ನಮ್ಮ ಮನೆಯಲ್ಲಿ ಹೇಳ್ತಿದಾರೆ. ಆದ್ರೆ ವರುಣಾ ಕ್ಷೇತ್ರದ ಟಿಕೆಟ್‌ ಕೇಳಿದ್ದೇನೆ ಅಂತ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. 2018ರಂತೆ ಈ ಬಾರಿಯೂ 2 ಕ್ಷೇತ್ರದಲ್ಲಿ ಸ್ಪರ್ಧಿಸುವ ಪ್ಲ್ಯಾನ್‌ ಹಾಕಿಕೊಂಡಿದ್ದು, ವರುಣಾ ಜೊತೆ ಮತ್ಯಾವ ಕ್ಷೇತ್ರದಲ್ಲಿ ಕಣಕ್ಕಿಳಿಯಲಿದ್ದಾರೆ ಅಂತ ಸಿದ್ದು ಹೇಳಿಲ್ಲ. ಆದ್ರೆ ಸಿದ್ದರಾಮಯ್ಯ ವರುಣಾ ಹಾಗೂ ಕೋಲಾರ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಅಂತ ಅವರ ಪುತ್ರ ಡಾ.ಯತೀಂದ್ರ ಹೇಳಿದ್ದಾರೆ. ಇನ್ನು ಆ ಕಡೆ ಬಾಗಲಕೋಟೆ ಜಿಲ್ಲೆಯಲ್ಲಿ ಮಾತನಾಡಿದ ಸಿದ್ರಾಮಯ್ಯ ನಾನು ಮುಖ್ಯಮಂತ್ರಿಯಾಗಬೇಕು ಅಂದ್ರೆ ನೀವೆಲ್ಲಾ ಕಾಂಗ್ರೆಸ್‌ಗೆ ಆಶೀರ್ವಾದ ಮಾಡಬೇಕು ಅಂತ ಹೇಳಿದ್ದಾರೆ. ಈ ಮೂಲಕ ಕ್ಷೇತ್ರ ಕಗ್ಗಂಟ್ಟಿನ ಜೊತೆಯಲ್ಲಿಯೇ ಸಿಎಂ ಆಸೆಯನ್ನೂ ಹೊರ ಚೆಲ್ಲಿದ್ದಾರೆ.

-masthmagaa.com

Contact Us for Advertisement

Leave a Reply