ಒಮ್ಮೆ ಪಾಕಿಸ್ತಾನ, ಸೌದಿಗೆ ಹೋದ್ರೆ ಹಿಜಾಬ್‌ ವಿದ್ಯಾರ್ಥಿನಿಯರಿಗೆ ನಮ್ಮ ದೇಶದ ಮಹತ್ವ ಗೊತ್ತಾಗುತ್ತೆ: ಯು.ಟಿ ಖಾದರ್‌

masthmagaa.com:

ಹಿಜಾಬ್‌ ಬೇಕೆ ಬೇಕು ಅಂತ ಹಠ ಹಿಡಿದಿರೋ ಮಂಗಳೂರಿನ ವಿದ್ಯಾರ್ಥಿನಿಯರಿಗೆ ಕಾಂಗ್ರೆಸ್‌ ನಾಯಕ ಯು.ಟಿ.ಖದರ್‌ ಮಾರ್ಮಿಕವಾಗಿ ಉತ್ತರಿಸಿದ್ದಾರೆ. ಹಿಜಾಬ್‌ ವಿದ್ಯಾರ್ಥಿನಿಯರು ಒಮ್ಮೆ ಪಾಕಿಸ್ತಾನ, ಸೌದಿಯಂತಹ ದೇಶಗಳಿಗೆ ಹೋಗಲಿ. ಆಗ ನಮ್ಮ ದೇಶದ ಮಹತ್ವ ಗೊತ್ತಾಗುತ್ತದೆ. ಇಲ್ಲಿ ಬೇಕಾದ ಹಾಗೆ ಮಾತನಾಡೋದು, ಡಿಸಿಯನ್ನ ಭೇಟಿಯಾಗೋದು, ಪ್ರೆಸ್‌ ಮೀಟ್‌ ಮಾಡೋದು ಎಲ್ಲಾ ಮಾಡಬಹುದು. ಆದ್ರೆ ಇದನ್ನೇ ಅಲ್ಲಿ ಹೋಗಿ ಮಾಡಲಿ. ಆಗ ನಮ್ಮ ದೇಶದ ಕಾನೂನು ನೀಡಿದ ಅವಕಾಶದ ಮಹತ್ವ. ಇಲ್ಲಿ ಸಿಗುವ ಸ್ವಾತಂತ್ರ್ಯದ ಅರಿವು ಆಗುತ್ತೆ ಅಂತ ಬುದ್ಧಿಮಾತು ಹೇಳಿದ್ದಾರೆ.

-masthmagaa.com

Contact Us for Advertisement

Leave a Reply