ಕಾಂಗ್ರೆಸ್‌ನ 3ನೇ ಪಟ್ಟಿ ರಿಲೀಸ್‌! ಸಿದ್ದುಗೆ ಇಲ್ಲ ಕೋಲಾರ್‌ ಟಿಕೆಟ್!

masthmagaa.com:

ರಾಜ್ಯ ವಿಧಾನಸಭಾ ಚುನಾವಣೆಗೆ 43 ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನ ಕಾಂಗ್ರೆಸ್‌ ಹೈಕಮಾಂಡ್‌ ಇಂದು ಪ್ರಕಟಿಸಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರದಿಂದಲೂ ಸ್ಪರ್ಧಿಸುತ್ತಾರೆ ಎನ್ನಲಾಗಿತ್ತು. ಆದ್ರೆ ಆ ಕ್ಷೇತ್ರದಿಂದ ಕೊತ್ತೂರು ಮಂಜುನಾಥ್‌ ಅವ್ರಿಗೆ ಟಿಕೆಟ್‌ ನೀಡಲಾಗಿದೆ. ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಯಾದ ಮಾಜಿ ಡಿಸಿಎಂ ಲಕ್ಷ್ಮಣ್‌ ಸವದಿ ಅವರು ಅಥಣಿ ಕ್ಷೇತ್ರದಿಂದ ಟಿಕೆಟ್‌ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ತೆರದಾಳ ಕ್ಷೇತ್ರದಿಂದ ಮಾಜಿ ಸಚಿವೆ, ನಟಿ ಉಮಾಶ್ರೀ ಅವ್ರಿಗೆ ಟಿಕೆಟ್‌ ಕೈತಪ್ಪಿದೆ. ಈ ಮೂಲಕ 224 ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್‌ ಈವರೆಗೆ 209 ಅಭ್ಯರ್ಥಿಗಳನ್ನ ಘೋಷಣೆ ಮಾಡಿದಂತಾಗಿದೆ. ಬಿಜೆಪಿ 212 ಹಾಗೂ ಜೆಡಿಎಸ್‌ 143 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಘೋಷಣೆ ಮಾಡಿವೆ. ಇತ್ತ ಕೋಲಾರ ಟಿಕೆಟ್ ಸಿದ್ದರಾಮಯ್ಯ ಅವ್ರನ್ನ ಬಿಟ್ಟು ಬೇರೆಯವ್ರ ಪಾಲಾಗುತ್ತಿದ್ದಂತೆಯೇ ಕ್ಷೇತ್ರದಲ್ಲಿ ಆಕ್ರೋಶ ಭುಗಿಲೆದ್ದಿದೆ. ಕ್ಷೇತ್ರಕ್ಕೆ ಕಾಂಗ್ರೆಸ್‌ ಟಿಕೆಟ್‌ ಘೋಷಣೆ ಬೆನ್ನಲ್ಲೇ ಮುಸ್ಲಿಂ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ. ಸಿದ್ದರಾಮಯ್ಯಗೆ ಟಿಕೆಟ್​ ನೀಡದಿದ್ದರೆ ಮುಸ್ಲಿಮರಿಗೆ ನೀಡುವಂತೆ ಒತ್ತಾಯಿಸಿ, ಕೋಲಾರದ ಕಾಂಗ್ರೆಸ್‌ ಕಚೇರಿಯಲ್ಲಿನ ವಸ್ತುಗಳನ್ನ ಒಡೆದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

-masthmagaa.com

Contact Us for Advertisement

Leave a Reply