ರಾಜ್ಯ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಹೊಗೆ, 37 ನಾಯಕರಿಗೆ ಹೈಕಮಾಂಡ್‌ ಬುಲಾವ್‌!

masthmagaa.com:

ಇನ್ನು ಈ ಕಡೆ ರಾಜ್ಯ ಕಾಂಗ್ರೆಸ್‌ನಲ್ಲಿ ದೊಡ್ಡ ದೊಡ್ಡ ಬೆಳವಣಿಗೆಗಳು ನಡೀತಾ ಇವೆ. ಅಧಿಕಾರ ತಗೊಂಡಿರೋ ಸಚಿವರು, ಶಾಸಕರುಗಳು ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಅನ್ನೋ ಆರೋಪ ಮಾಡಲಾಗ್ತಿತ್ತು. ಈ ಸುದ್ದಿ ಹೊರಬಂದ ಬೆನ್ನಲ್ಲೇ ಆ ಕಡೆ ಆಗಸ್ಟ್ 2ರಂದು ದೆಹಲಿಯಲ್ಲಿ ರಾಜ್ಯ ಕಾಂಗ್ರೆಸ್‌ ನಾಯಕರ ಸಭೆ ಕರೆಯಲಾಗಿದೆ. ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿ 37 ನಾಯಕರು ಭಾಗಿಯಾಗಲಿದ್ದಾರೆ. ಅದೇ ದಿನ ಶಾಸಕರು, ಪಕ್ಷ ಹಾಗೂ ಸರ್ಕಾರದ ನಡುವೆ ಹೊಂದಾಣಿಕೆಗಾಗಿ ಸಮನ್ವಯ ಸಮಿತಿ ರಚಿಸಲು ಕೈ ಹೈಕಮಾಂಡ್ ಪ್ಲಾನ್‌ ಮಾಡಿದೆ. ಇತ್ತ ಮಂತ್ರಿ ಪಟ್ಟ ಸಿಗದ ಅತೃಪ್ತ ಕಾಂಗ್ರೆಸ್ ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರಿಗೆ ಇನ್ನಿತರ ಅಧಿಕಾರ ಹಂಚೋಕೆ‌ ಕೂಡ ಕಾಂಗ್ರೆಸ್‌ ಪಕ್ಷದಲ್ಲಿ ಚಟುವಟಿಕಗಳು ನಡೀತಾ ಇವೆ.

-masthmagaa.com

Contact Us for Advertisement

Leave a Reply