ಕರ್ನಾಟಕದ ರೀತಿ ತೆಲಂಗಾಣದಲ್ಲೂ ಬಿಜೆಪಿಯನ್ನ ನಾಶ ಮಾಡುತ್ತೇವೆ: ರಾಹುಲ್‌ ಗಾಂಧಿ

masthmagaa.com:

ಕರ್ನಾಟಕ ವಿಧಾನಸಭಾ ಚುನಾವಣೆ ಗೆಲುವಿನ ನಂತ್ರ ತೆಲಂಗಾಣ ಮತ್ತು ಇತರ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್‌, ಬಿಜೆಪಿಯನ್ನು ಸಂಪೂರ್ಣವಾಗಿ ನಾಶ ಮಾಡಲಿದೆ ಅಂತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಕೇವಲ ಕಾಂಗ್ರೆಸ್ ಪಕ್ಷವಲ್ಲ, ಭಾರತದ ಜನರು ಬಿಜೆಪಿಯ ದ್ವೇಷ ತುಂಬಿದ ಸಿದ್ಧಾಂತವನ್ನು ಸೋಲಿಸಲಿದ್ದಾರೆ ಅಂತ ಹೇಳಿದ್ದಾರೆ. ನಾವು ಕರ್ನಾಟಕದಲ್ಲಿ ಬಿಜೆಪಿಯನ್ನು ಬುಡಮೇಲು ಮಾಡಬಲ್ಲೆವು ಅಂತ ತೋರಿಸಿದ್ದೇವೆ. ನಾವು ಅವರನ್ನು ಸೋಲಿಸಲಿಲ್ಲ, ಅವರನ್ನು ನಾಶ ಮಾಡಿದ್ದೇವೆ. ನಾವು ಅವರನ್ನು ಹೊಸಕಿ ಹಾಕಿದ್ದೇವೆ ಅಂತ ಅಮೆರಿಕ ಪ್ರವಾಸದಲ್ಲಿರುವ ರಾಹುಲ್‌ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದೇ ವೇಳೆ ನಾವು ಮುಂದೆ ತೆಲಂಗಾಣದಲ್ಲಿಯೂ ಕೂಡ ಬಿಜೆಪಿಯನ್ನ ನಾಶಪಡಿಸಲಿದ್ದೇವೆ. ಈ ಚುನಾವಣೆಯ ನಂತರ ತೆಲಂಗಾಣದಲ್ಲಿ ಬಿಜೆಪಿಯನ್ನು ಹುಡುಕುವುದು ಕಷ್ಟವಾಗುತ್ತೆ ಅಂತ ತಿಳಿಸಿದ್ದಾರೆ.

-masthmagaa.com

Contact Us for Advertisement

Leave a Reply