masthmagaa.com:
ದಿಲ್ಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಅರೆಸ್ಟ್ ಆಗಿರೊ ಇಬ್ಬರು ಉದ್ಯಮಿಗಳು ಸೇರಿದಂತೆ 7 ಆರೋಪಿಗಳ ವಿರುದ್ದ CBI ತನ್ನ ಮೊದಲ ಚಾರ್ಜ್ಶೀಟ್ ಸಲ್ಲಿಸಿದೆ. ಆದರೆ ಎಫ್ಐಆರ್ನಲ್ಲಿ ಹೆಸರಿಸಲಾಗಿರೊ ದಿಲ್ಲಿ ಡಿಸಿಎಂ ಮನೀಶ್ ಸಿಸೋಡಿಯಾ ಹೆಸರು ಇಂದು ಸಲ್ಲಿಸಿರೊ ಚಾರ್ಜ್ಶೀಟ್ನಲ್ಲಿ ಇಲ್ಲ. ಆದ್ರೆ ಈ ಹಿಂದೆ ಮನೀಶ್ ಸಿಸೋಡಿಯಾ ಹೆಸರು ಹಗರಣದಲ್ಲಿ ಕೇಳಿ ಬಂದಿತ್ತು. ಅಲ್ಲದೇ ಈ ಬಗ್ಗೆ ಸಿಬಿಐ ಸಿಸೋಡಿಯಾ ಮನೆ ಮೇಲೆ ದಾಳಿ ನಡೆಸಿತ್ತು. ವಿಚಾರಣೆಗೂ ಒಳಪಡಿಸಿತ್ತು. ಇದರ ಬೆನ್ನಲ್ಲೇ ಸಿಸೋಡಿಯಾ ಸಿಬಿಐನೇ ನನಗೆ ಕ್ಲೀನ್ಚಿಟ್ ನೀಡಿದೆ. ಸುಳ್ಳು ಆರೋಪ ಮಾಡಿದ ಲೆಫ್ಟಿನೆಂಟ್ ಗವರ್ನರ್ ರಾಜಿನಾಮೆ ನೀಡ್ಬೇಕು ಅಂತ ಹೇಳಿದ್ದಾರೆ.
-masthmagaa.com
Contact Us for Advertisement