masthmagaa.com
ದೆಹಲಿ: ದೇಶದಾದ್ಯಂತ ಕೊರೋನಾ ವೈರಸ್ ಸೋಂಕು ಹರಡುವ ಭೀತಿ ಎಲ್ಲರನ್ನೂ ಕಾಡುತ್ತಿದೆ. ಈ ನಡುವೆ ವಿದೇಶಾಂಗ ಮತ್ತು ಸಂಸದೀಯ ವ್ಯವಹಾರಗಳ ರಾಜ್ಯ ಖಾತೆ ಸಚಿವ ವಿ.ಮುರಳೀಧರನ್ ಅವರಿಗೂ ಕೊರೋನಾ ಭೀತಿ ಆವರಿಸಿದೆ.
ವಿ.ಮುರಳೀಧರನ್ ಈ ಹಿಂದೆ ಕೇರಳದ ತಿರುವನಂತಪುರಂ ಆಸ್ಪತ್ರೆಗೆ ಭೇಟಿ ನೀಡಿದ್ದರು. ಈ ವೇಳೆ ವೈದ್ಯರೊಂದಿಗೆ ಕಾನ್ಫರೆನ್ಸ್ ನಡೆಸಿದ್ದರು. ಆದ್ರೆ ಆ ಸಭೆಯಲ್ಲಿದ್ದ ವೈದ್ಯರೊಬ್ಬರಿಗೆ ಕೊರೋನಾ ಸೋಂಕು ತಗುಲಿದೆ. ಹೀಗಾಗಿ ಸಚಿವರಿಗೂ ಕೊರೋನಾ ಭೀತಿ ಆವರಿಸಿದ್ದು, ದೆಹಲಿಯ ನಿವಾಸದಲ್ಲೇ ಪ್ರತ್ಯೇಕ ಕೊಠಡಿಯಲ್ಲಿ ತಮಗೆ ತಾವೇ ನಿರ್ಬಂಧ ವಿಧಿಸಿಕೊಂಡಿದ್ದಾರೆ. ಅಲ್ಲದೆ ಈಗಾಗಲೇ ಕೊರೋನಾ ಪರೀಕ್ಷೆ ನಡೆಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ.
masthmagaa.com
Contact Us for Advertisement