ಮೋದಿ ಸರ್ಕಾರದ ಸಚಿವರಿಗೂ ಕೊರೋನಾ ಭೀತಿ..!

masthmagaa.com

ದೆಹಲಿ: ದೇಶದಾದ್ಯಂತ ಕೊರೋನಾ ವೈರಸ್ ಸೋಂಕು ಹರಡುವ ಭೀತಿ ಎಲ್ಲರನ್ನೂ ಕಾಡುತ್ತಿದೆ. ಈ ನಡುವೆ ವಿದೇಶಾಂಗ ಮತ್ತು ಸಂಸದೀಯ ವ್ಯವಹಾರಗಳ ರಾಜ್ಯ ಖಾತೆ ಸಚಿವ ವಿ.ಮುರಳೀಧರನ್​ ಅವರಿಗೂ ಕೊರೋನಾ ಭೀತಿ ಆವರಿಸಿದೆ.

ವಿ.ಮುರಳೀಧರನ್ ಈ ಹಿಂದೆ ಕೇರಳದ ತಿರುವನಂತಪುರಂ ಆಸ್ಪತ್ರೆಗೆ ಭೇಟಿ ನೀಡಿದ್ದರು. ಈ ವೇಳೆ ವೈದ್ಯರೊಂದಿಗೆ ಕಾನ್ಫರೆನ್ಸ್ ನಡೆಸಿದ್ದರು. ಆದ್ರೆ ಆ ಸಭೆಯಲ್ಲಿದ್ದ ವೈದ್ಯರೊಬ್ಬರಿಗೆ ಕೊರೋನಾ ಸೋಂಕು ತಗುಲಿದೆ. ಹೀಗಾಗಿ ಸಚಿವರಿಗೂ ಕೊರೋನಾ ಭೀತಿ ಆವರಿಸಿದ್ದು, ದೆಹಲಿಯ ನಿವಾಸದಲ್ಲೇ ಪ್ರತ್ಯೇಕ ಕೊಠಡಿಯಲ್ಲಿ ತಮಗೆ ತಾವೇ ನಿರ್ಬಂಧ ವಿಧಿಸಿಕೊಂಡಿದ್ದಾರೆ. ಅಲ್ಲದೆ ಈಗಾಗಲೇ ಕೊರೋನಾ ಪರೀಕ್ಷೆ ನಡೆಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ.

masthmagaa.com

Contact Us for Advertisement

Leave a Reply